ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮಾರುತಿ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಯಾಗಿರುವ ಮೊಹಮದ್ ಸನಾ ಉಲ್ಲಾ ಎಂಬುವವರು ತಮಗೆ ಪರಿಚಯವಿರುವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದ ಕಾರಣ ಮಂಗಳೂರಿಗೆ ಹೋಗಿ ವಾಪಾಸ್ ಶಿವಮೊಗ್ಗಕ್ಕೆ ಬರುವಾಗ ಹೊನ್ನಾಪುರದ ಬಳಿ ಮಾರುತಿ ಓಮ್ನಿಗೆ ಬೆಂಕಿ ಹತ್ತಿಕೊಂಡಿದೆ.
ಐದು ಜನರಿದ್ದ ವಾಹನದಲ್ಲಿ ಓರ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಬೆಂಕಿಗೆ ಕಾರಣ ಸ್ಪಷ್ಟವಾಗಿ ತಿಳಿದು ಬರಬೇಕಿದೆ. ಮಾಹಿತಿ ಪ್ರಕಾರ ಮಾರುತಿ ಓಮ್ನಿಯನ್ನು ಗ್ಯಾಸ್ನಲ್ಲಿ ಓಡಿಸುತ್ತಿದ್ದ ಸನಾ ಉಲ್ಲಾ ಇಂದು ಪೆಟ್ರೋಲ್ಗೆ ಸ್ವಿಚ್ ಓವರ್ ಮಾಡಿಕೊಂಡಿದ್ದರು. ಈ ಸ್ವಿಚ್ ಓವರ್ ಶಾರ್ಟ್ ಆಗಲು ಕಾರಣವೆಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಡಿ.14ರಂದು ಲೋಕ ಅದಾಲತ್: ಸಿವಿಲ್ ನ್ಯಾಯಾಧೀಶ ವೀರಭದ್ರಯ್ಯ
ತುಂಗಾ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.