ಶಿವಮೊಗ್ಗ | ಪ್ರೀತಿ ನಿರಾಕರಿಸಿದ ಯುವತಿಗೆ ಕೊಲೆ ಬೆದರಿಕೆ; ಯುವಕನ ವಿರುದ್ಧ ದೂರು ದಾಖಲು

Date:

Advertisements

ಹನಿಟ್ರ್ಯಾಪ್ ಎಂದು ಕರೆದುಕೊಂಡ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹದಿಹರೆಯದವರಿಬ್ಬರ ನಡುವೆ ಬೆಳೆದ ಪ್ರೀತಿ ಸಧ್ಯಕ್ಕೆ ಠಾಣೆ ಮೆಟ್ಟಿಲೇರಿದೆ.

ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಮೂರುವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಶುರುವಾದ ಪರಿಚಯ ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಅವರಿಬ್ಬರ ಪ್ರೀತಿ ಬಗ್ಗೆ ಮನೆಯವರಿಗೆ ಗೊತ್ತಾಗುತ್ತದೆಯೋ ಆಗ ಯುವತಿಯ ಮನೆಯವರು ಅಕ್ಷೇಪಿಸಿದ್ದಾರೆ.

ಮನೆಯವರ ಅಕ್ಷೆಪಣೆಯಿಂದ ಹಿಂದೆ ಸರಿದ ಯುವತಿಯನ್ನು ಸಂಪರ್ಕಿಸಲು ಯುವಕ ಅನೇಕ ಬಾರಿ ಯತ್ನಿಸಿದ್ದಾನೆ. ಯುವತಿ ಹಿಂದೆ ಸರಿದ ಪರಿಣಾಮ ಯುವಕ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾನೆ. ಯುವತಿ ಸಲುಗೆಯಿಂದ ಇದ್ದಾಗ ತೆಗೆದ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಲುವೆಗೆ ಬಿದ್ದ ಗೂಡ್ಸ್ ಆಟೋ: ಮಹಿಳಾ ಕೂಲಿಕಾರರನ್ನು ನಡು ನೀರಲ್ಲಿ ಬಿಟ್ಟು ಚಾಲಕ ಪರಾರಿ!

ಅಷ್ಟಕ್ಕೂ ನಿಲ್ಲದ ಆತನ ಆಕ್ರೋಶ, ಆಕೆಯ ಬೆತ್ತಲೆ ಫೋಟೊಗಳನ್ನೂ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡಿದ್ದಾನೆ. ಯುವಕನಿಗೆ ಬುದ್ದಿವಾದ ಹೇಳಲು ಬಂದ ಯುವತಿಯ ಕುಟುಂಬಸ್ಥರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಯುವತಿ ಆತನ ವಿರುದ್ಧ ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X