ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

Date:

Advertisements

ಗಾಯಕ ಟಿಎಂ ಕೃಷ್ಣ ಅವರಿಗೆ ‘ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿ’ ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ಮಂಗಳವಾರ (ನವೆಂಬರ್ 19) ನಿರ್ಬಂಧಿಸಿದೆ. ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡದಂತೆ ‘ದಿ ಹಿಂದೂ ಪತ್ರಿಕೆಗೆ’ ನಿರ್ಬಂಧಿಸಿದೆ.

ದಿ ಹಿಂದೂ ಪತ್ರಿಕೆ 2005ರಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲು ಆರಂಭಿಸಿತು. ಚೆನ್ನೈ ಮ್ಯೂಸಿಕ್ ಅಕಾಡೆಮಿ ನೀಡುವ ಸಂಗೀತ ಕಲಾನಿಧಿ ಪಶಸ್ತಿ ಗೆದ್ದವರಿಗೆ ಈ ನಗದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ವರ್ಷ ಕರ್ನಾಟಿಕ್ ಸಂಗೀತ ಗಾಯಕ ಟಿಎಂ ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಪ್ರಶಸ್ತಿ ಲಭಿಸಿದೆ. ಈ ನಿಟ್ಟಿನಲ್ಲಿ ದಿ ಹಿಂದೂ ಪತ್ರಿಕೆ ಅವರಿಗೆ ‘ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ಘೋಷಿಸಿದೆ.

ಎಂಎಸ್ ಸುಬ್ಬುಲಕ್ಷ್ಮಿ ಅವರ ಮೊಮ್ಮಗ ಶ್ರೀನಿವಾಸನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿದೆ.

Advertisements

ಇದನ್ನು ಓದಿದ್ದೀರಾ? ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಮತ್ತು ಸಂಘದ ಗೌರವ ಪ್ರಶಸ್ತಿ ಪ್ರಕಟ

ಈ ಹಿಂದೆ ಟಿಎಂ ಕೃಷ್ಣ ಅವರು ಎಂ ಎಸ್ ಸುಬ್ಬುಲಕ್ಷ್ಮಿ ಅವರನ್ನು ಟೀಕಿಸಿದ್ದರು. ಹಾಗಾಗಿ ನನ್ನ ಅಜ್ಜಿಯನ್ನು ನಿರಂತರವಾಗಿ ಟೀಕಿಸುವವರಿಗೆ ಪ್ರಶಸ್ತಿ ನೀಡಬಾರದು ಎಂಬುದು ಶ್ರೀನಿವಾಸನ್ ವಾದವಾಗಿದೆ.

ಈ ಅರ್ಜಿ ಪುರಸ್ಕರಿಸಿದ ಮದ್ರಾಸ್ ಹೈಕೋರ್ಟ್ “ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಪ್ರಶಸ್ತಿ ನೀಡುವುದು ಅವರ ಆಶಯಕ್ಕೆ ವಿರುದ್ಧವಾಗಿದೆ” ಎಂದು ಅಭಿಪ್ರಾಯಿಸಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದನ್ನು ಮುಂದುವರಿಸಬಾರದು ಎಂದು ಆದೇಶಿಸಿದೆ.

ಹಾಗೆಯೇ ಶ್ರೀನಿವಾಸನ್ ಅರ್ಜಿ ತಿರಸ್ಕರಿಸುವಂತೆ ಕೋರಿ ಸಂಗೀತ ಅಕಾಡೆಮಿ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಆಕೆಯ ಇಚ್ಛೆಯ ಬಗ್ಗೆ ತಿಳಿದಿರುವ ಶ್ರೀನಿವಾಸನ್‌ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಎಂದು ಪೀಠ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಟಿ ಎಂ ಕೃಷ್ಣ ಅವರದು ಬಹುಮುಖ ಪ್ರತಿಭೆ. ಅವರ ಗಾಯನ ಅದ್ಭುತವಾದುದು. ಸಂಗೀತ ಪ್ರೇಮಿಗಳ ಅಚ್ಚು ಮೆಚ್ಚಿನ “ಶ್ರೀಕೃಷ್ಣ” ಅವರು. ಅವರಿಗೆ ಪ್ರಶಸ್ತಿಗಳ ಅಗತ್ಯವಿಲ್ಲ. ಪ್ರಶಸ್ತಿಗಳನ್ನು ಪಡೆಯದೇ ಪ್ರಸಿದ್ಧರಾದವರು ಅವರು. ಸಂಗೀತ ಪ್ರಿಯರ ಪ್ರೀತಿಯ ಪ್ರಶಂಸೆಯೇ ಅವರಿಗೆ ಎಲ್ಲಕ್ಕಿಂತ ದೊಡ್ಡ ಪ್ರಶಸ್ತಿ. ಅ ದೊಡ್ಡ ಪ್ರಶಸ್ತಿಯನ್ನು ಅವರು ಈಗಾಗಲೇ ಗಳಿಸಿದ್ದಾರೆ. ಪ್ರಶಸ್ತಿ ನೀಡಿದೊಡನೆ ಅವರ ಪ್ರತಿಭೆ ಮತ್ತಷ್ಟು ಉತ್ತುಂಗಕ್ಕೇರುವುದಿಲ್ಲ. ಪ್ರಶಸ್ತಿ ನೀಡದಿದ್ದರೆ ಅವರ ಪ್ರತಿಭೆ ಯಾವ ಕಾರಣಕ್ಕೂ ಕುಗ್ಗುವುದೂ ಇಲ್ಲ. ಟಿ ಎಂ ಕೃಷ್ಣ ಅವರಿಗೆ ಯಾವುದೇ ಪ್ರಶಸ್ತಿಯನ್ನು ನೀಡಿದರೂ, ಅದು ಆ ಪ್ರಶಸ್ತಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X