ಗದಗ | ಜಿ.ಎಸ್ ಪಾಟೀಲ್‌ಗೆ ಮಂತ್ರಿಗಿರಿ ನೀಡದಿದ್ದರೆ ಸಾಮೂಹಿಕ ರಾಜೀನಾಮೆ

Date:

Advertisements

ವಿಧಾನಸಭೆ ಚುನಾವಣೆಗೆ ಬಳಿಕ ಕಾಂಗ್ರೆಸ್‌ ತಲೆನೋವಿನ ಭಾರ ಹೆಚ್ಚುತ್ತಿದೆ. ಸವಾಲಾಗಿದ್ದ ಮುಖ್ಯಮಂತ್ರಿ ಯಾರೆಂಬ ಪ್ರಶ್ನೆಗೆ ಉತ್ತರ ಕಂಡುಕೊಂಡ ಕಾಂಗ್ರೆಸ್‌ ಹೈಕಮಾಂಡ್‌ಗೆ ಈಗ ಸಚಿವ ಸಂಪುಟ ವಿಸ್ತರಣೆ ಮತ್ತೊಂದು ಸವಾಲಾಗಿದೆ. ಮಂತ್ರಿಗಿರಿಗಾಗಿ ಹಿರಿಯ ಕಾಂಗ್ರೆಸ್‌ ಶಾಸಕರಲ್ಲಿ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆ ತಮ್ಮ ನಾಯಕರಿಗೆ ಮಂತ್ರಿಗಿರಿ ನೀಡದಿದ್ದರೆ, ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆಂದು ಶಾಸಕರ ಬೆಂಬಲಿಗರು ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾರೆ.

ಗದಗ ಜಿಲ್ಲೆಯ ರೋಣಶಾಸಕ ಜಿ.ಎಸ್ ಪಾಟೀಲ್‌ಗೆ ಸಚಿವ ಸ್ಥಾನ ನೀಡದಿದ್ದರೆ, ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿ, ಪಕ್ಷ ತೊರೆಯುತ್ತೇವೆಂದು ಪಾಟೀಲ್‌ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಗದಗದಲ್ಲಿ ಸಭೆ ನಡೆಸಿದ ಕೈ ಮುಖಂಡರು ಮತ್ತು ಕಾರ್ಯಕರ್ತರು, “ಜಿ.ಎಸ್ ಪಾಟೀಲ್‌ಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ, ಪಕ್ಷದಲ್ಲಿ ತಾವು ಹೊಂದಿರುವ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡುತ್ತೇವೆ. ಮಾತ್ರವಲ್ಲದೆ, ಮಂಗಳವಾರ (ಮೇ.23) ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

Advertisements

“ಕಾಂಗ್ರೆಸ್ ಅಧಿಕಾರ ಬಂದ ಸಂದರ್ಭದಲ್ಲಿ ಪ್ರತಿ ಬಾರಿಯೂ ರೋಣ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗುತ್ತದೆ. ಜಿ.ಎಸ್ ಪಾಟೀಲ್ ಅವರು ನಾಲ್ಕು ದಶಕಗಳಿಂದ ಕ್ಷೆತ್ರದಲ್ಲಿ ಪಕ್ಷ ಕಟ್ಟಿದ್ದಾರೆ. ಅಲ್ಲದೆ, ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಲೇಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X