ಬೀದರ್‌ | ವಚನ ಕಂಠಪಾಠ ಸ್ಪರ್ಧೆ : 816 ವಚನ ಹೇಳಿದ ವಿದ್ಯಾರ್ಥಿ ಶಿವರಾಜ ಪ್ರಥಮ ಸ್ಥಾನ

Date:

Advertisements

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ ಕಂಠಪಾಠ ಸ್ಪರ್ಧೆ ಫಲಿತಾಂಶವನ್ನು ಬಸವಕಲ್ಯಾಣ ಅನುಭವ ಮಂಟಪ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಭಾಲ್ಕಿ ಹಿರೇಮಠದ ಗುರುಬಸವ ಪಟ್ಟದ್ದೇವರ ಸಾನಿಧ್ಯದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿದ ಬಾಗಲಕೋಟ ಜಿಲ್ಲೆಯ ಸವದಿ ಗ್ರಾಮದ ಭಾಲ್ಕಿ ಹಿರೇಮಠ ಸಂಸ್ಥಾನದ ಪ್ರಸಾದ ನಿಲಯದ ವಿದ್ಯಾರ್ಥಿ ಶಿವರಾಜ ಪಾಟೀಲ 816 ವಚನಗಳು ಹೇಳುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಬೀದರ ಜಿಲ್ಲೆಯ ಹುಮನಾಬಾದದ ಡಾ.ಕಲ್ಯಾಣಮ್ಮ ರಾಮೇಶಚಂದ್ರ ಮಟ್ಟಿ 505 ವಚನಗಳು ಹೇಳಿ ಎರಡನೇ ಸ್ಥಾನ ಗಳಿಸಿದ್ದಾರೆ. ಬೀದರನ ಬಸವಗಿರಿಯ ಚೆನ್ನಬಸವಣ್ಣ 433 ವಚನಗಳು ಹೇಳಿ ತೃತೀಯ ಸ್ಥಾನವನ್ನು ಪಡೆದಿಕೊಂಡಿದ್ದಾರೆ.

ಬೆಂಗಳೂರು ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಕಲಬುರಗಿ, ಬೀದರ ಮುಂತಾದ ಜಿಲ್ಲೆಗಳಿಂದ 108 ಸ್ಪರ್ಧಾಳುಗಳು ಆಗಮಿಸಿದ್ದರು. ಇವರಲ್ಲಿ 20 ವಿದ್ಯಾರ್ಥಿಗಳು 200ಕ್ಕಿಂತಲೂ ಹೆಚ್ಚಿನ ವಚನಗಳನ್ನು, 35 ವಿದ್ಯಾರ್ಥಿಗಳು ನೂರಕ್ಕಿಂತಲೂ ಹೆಚ್ಚಿನ ವಚನಗಳನ್ನು ಹೇಳುವ ಮೂಲಕ ಪ್ರೇಕ್ಷಕರಲ್ಲಿ ಬೆರಗು ಮೂಡಿಸಿದರು.

Advertisements

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ವಚನ ಪುಸ್ತಕ ನೀಡಲಾಯಿತು. ವಿಜೇತರಾದವರಿಗೆ 2024ರ ನ. 23, 24 ರಂದು ಬಸವಕಲ್ಯಾಣದಲ್ಲಿ ನಡೆಯುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಅನುಭವ ಮಂಟಪದ ಕಾರ್ಯದರ್ಶಿ ಡಾ.ಎಸ್.ಬಿ. ದುರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ನ. 22ರಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ ‘ಕನ್ನಡ ಜಾಗೃತಿ’ ಪ್ರಶಸ್ತಿ ಪ್ರದಾನ

ಪ್ರಥಮ ಬಹುಮಾನ 20 ಸಾವಿರ, ದ್ವಿತೀಯ ಬಹುಮಾನ 15 ಸಾವಿರ, ತೃತೀಯ ಬಹುಮಾನ 10 ಸಾವಿರ ಶರಣೆ ಸುಶೀಲಾದೇವಿ ಬಿ.ವಿ. ಪಟೇಲ್ ಚಾರಿಟೇಬಲ್ ಟ್ರಸ್ಟ್ ಬಸವಲ್ಯಾಣ ಇವರ ದಾಸೋಹತ್ವದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X