ದಕ್ಷಿಣ ಕನ್ನಡ | ಜಾನುವಾರುಗಳ ಪಶು ಆಧಾರ್‌ ನೋಂದಣಿಗೆ ಸಿದ್ಧತೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.5 ಲಕ್ಷ ಜಾನುವಾರುಗಳನ್ನು ಪಶು ಆಧಾರ್ ನೋಂದಣಿಗೆ ಒಳಪಡಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ವಿಜ್ಞಾನಗಳ ಇಲಾಖೆ ಸಜ್ಜಾಗಿದೆ.

ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ಮಾಹಿತಿ ಜಾಲದ ಅಡಿಯಲ್ಲಿ ಜಿಲ್ಲೆಯ ಪ್ರತಿ ಸಾಕು ಜಾನುವಾರುಗಳಿಗೆ ಬಯೋಮೆಟ್ರಿಕ್ ವಿವರಗಳೊಂದಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಲಾಗುವುದು. ಈ ದತ್ತಾಂಶದಿಂದ ಜಿಲ್ಲೆಯ ಜಾನುವಾರುಗಳ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು, ವಿಶೇಷವಾಗಿ ರೋಗಗಳನ್ನು ನಿಭಾಯಿಸಲು ಸಹಾಯವಾಗುತ್ತದೆ” ಎಂದು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನಗಳ ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ 2.5 ಲಕ್ಷಕ್ಕೂ ಹೆಚ್ಚು ಜಾನುವಾರುಗಳ ಮೂಗಿನ ಮಾದರಿಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭಿಸಲು ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ. ಜಾನುವಾರುಗಳಿಗೆ ಈ ಮೊದಲು 12 ಅಂಕಿಗಳ ಗುರುತಿನ ಸಂಖ್ಯೆಗಳೊಂದಿಗೆ ಕಿವಿ ಟ್ಯಾಗ್ ನೀಡಲಾಗುತ್ತಿತ್ತು. ಇದರಿಂದ ಕಿವಿಗಳಲ್ಲಿ ಗಾಯಗಳು, ಸೋಂಕುಗಳು ಮತ್ತು ಅಲರ್ಜಿಗಳಿಗೆ ಕಾರಣವಾಗಿದೆ. ಕಿವಿ ಟ್ಯಾಗ್‌ಗಳು ಬಳ್ಳಿಗಳು ಮತ್ತು ಬೇಲಿಗಳಿಗೆ ಸಿಕ್ಕಿಕೊಂಡಾಗ ಹಸುಗಳು ಗಾಯಗೊಂಡ ಉದಾಹರಣೆಗಳಿವೆ” ಎಂದು ತಿಳಿಸಿದ್ದಾರೆ.

Advertisements

“ಜಾನುವಾರುಗಳ ಕಿವಿಯೋಲೆಗಳನ್ನು ಬದಲಿಸಿ, ದೇಶೀಯ ಜಾನುವಾರುಗಳ ಮೂಗಿನ ಮಾದರಿ ಗುರುತಿಸುವಿಕೆಯನ್ನು ಪರಿಚಯಿಸಲು ಸರ್ಕಾರ ನಿರ್ಧರಿಸಿದೆ. ಜಾನುವಾರುಗಳನ್ನು ಗುರುತಿಸುವ ಉದ್ದೇಶದಿಂದ ಮೂಗಿನ ಮಾದರಿಯನ್ನು ಸ್ಕ್ಯಾನ್ ಮಾಡಲಾಗುತ್ತದೆ. ಇದನ್ನು ಬಯೋಮೆಟ್ರಿಕ್ ಡೇಟಾವಾಗಿ ಬಳಸಲಾಗುತ್ತದೆ” ಎಂದರು.

“ಪ್ರತಿ ಜಾನುವಾರುಗಳು ತನ್ನದೇ ಆದ ವಿಶಿಷ್ಟ ಮೂಗಿನ ಮಾದರಿಯನ್ನು ಹೊಂದಿದ್ದು, ಉಳಿದ ಪ್ರಾಣಿಗಳಿಗಿಂತ ಭಿನ್ನವಾಗಿರುತ್ತವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಮನರೇಗಾ ಕೂಲಿಕಾರರಿಗೆ ಶ್ರಮಿಕ ಆರೋಗ್ಯ ಅಭಿಯಾನ ಆಯೋಜನೆ

“ಜಿಲ್ಲೆಯ ಎಲ್ಲ ಜಾನುವಾರುಗಳ ಮೂಗಿನ ಮಾದರಿ ಸಂಗ್ರಹಕ್ಕೆ ಸಿದ್ಧರಾಗುವಂತೆ ಇಲಾಖೆ ಸಿಬ್ಬಂದಿಗೆ ಸರ್ಕಾರ ಸುತ್ತೋಲೆ ಕಳುಹಿಸಿದೆ. ಈ ಉದ್ದೇಶಕ್ಕಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಸಾಫ್ಟ್‌ವೇರ್ ಅಪ್ಲಿಕೇಶನ್‌ಗಳನ್ನು ಒದಗಿಸುತ್ತದೆ” ಎಂದು ತಿಳಿಸಿದ್ದಾರೆ.

20ನೇ ಜಾನುವಾರು ಗಣತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65,997 ಸ್ಥಳೀಯ ಹಾಗೂ 1,84,572 ಮಿಶ್ರತಳಿ ಸೇರಿದಂತೆ ಒಟ್ಟು 2,50,569 ಜಾನುವಾರುಗಳಿವೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X