Assembly Polls | ಮಹಾರಾಷ್ಟ್ರ & ಜಾರ್ಖಂಡ್‌ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಆರಂಭ

Date:

Advertisements

ಮಹಾರಾಷ್ಟ್ರದ ಎಲ್ಲ 288 ವಿಧಾನಸಭಾ ಕ್ಷೇತ್ರ ಮತ್ತು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲೂ ಬುಧವಾರ (ನ.20) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

ಹಾಗೆಯೇ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಎಲ್ಲ ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭಗೊಂಡಿದ್ದು, ಮತದಾರರು ಮತಗಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಸಂಜೆ 6 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.

ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ4,136 ಹುರಿಯಾಳುಗಳು ಕಣದಲ್ಲಿದ್ದಾರೆ. ರಾಜ್ಯದ 9.70 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಬಿಜೆಪಿ 148, ಕಾಂಗ್ರೆಸ್‌ 103, ಶಿವಸೇನೆ (ಉದ್ಧವ್‌ ಬಣ) 89, ಶಿವಸೇನೆ (ಶಿಂಧೆ ಬಣ) 80, ಎನ್‌ಸಿಪಿ (ಎಸ್‌ಪಿ ಬಣ) 87, ಎನ್‌ಸಿಪಿ (ಎಪಿ ಬಣ) 53 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.

Advertisements

ಜಾರ್ಖಂಡ್‌ ವಿಧಾನಸಭೆಯ 38 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದ 1.23 ಕೋಟಿ ಮತದಾರರು 55 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 528 ಹರಿಯಾಳುಗಳು ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ‘ಮಹಾಯುತಿ’ ಹಾಗೂ ವಿಪಕ್ಷ ‘ಮಹಾ ವಿಕಾಸ ಆಘಾಡಿ’ ಮೈತ್ರಿಕೂಟಗಳ ನೇರ ಹಣಾಹಣಿಗೆ ಸಾಕ್ಷಿಯಾಗಿರುವ ವಿಧಾನಸಭಾ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದೆ. ನವೆಂಬರ್ 23ರಂದು ಮಹಾರಾಷ್ಟ್ರ, ಜಾರ್ಖಂಡ್ ಮತ್ತು 46 ವಿಧಾನಸಭಾ ಕ್ಷೇತ್ರಗಳ ಮತ್ತು ಎರಡು ಲೋಕಸಭಾ ಸ್ಥಾನಗಳ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

ಮತದಾನ ಮಾಡಲು ಪ್ರಧಾನಿ ಮನವಿ

“ಎಲ್ಲರೂ ಬಂದು ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಆಚರಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಕರೆ ನೀಡಿದ್ದಾರೆ.

RSS ಮುಖ್ಯಸ್ಥ ಮೋಹನ್ ಭಾಗವತ್ ಮತದಾನ

ಮಹಾರಾಷ್ಟ್ರದ ನಾಗಪುರದಲ್ಲಿ ಮತದಾನ ಮಾಡಿದ ಆರ್‌ಎಸ್ ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. “ಎಲ್ಲರೂ ಬಂದು ವೋಟ್ ಮಾಡುವಂತೆ ಮನವಿ ಮಾಡಿದರು. ಮತದಾನ ಎಲ್ಲರ ಹಕ್ಕು ಆಗಿದ್ದು, ಪ್ರತಿಯೊಬ್ಬರೂ ಮತ ಚಲಾಯಿಸಬೇಖು, ನಾನು ಮತದಾನ ಮಾಡುವುದಕ್ಕಾಗಿಯೇ ಉತ್ತರಾಂಚಲದಿಂದ ನಿನ್ನೆ ರಾತ್ರಿ ಬಂದಿರುವೆ” ಎಂದರು.

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಗ್ಯಾರಂಟಿಗಳ ಅಬ್ಬರ

ಮಹಾರಾಷ್ಟ್ರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಭರಪೂರ ಉಚಿತ ಹಾಗೂ ಗ್ಯಾರಂಟಿ ಯೋಜನೆ ಘೋಷಣೆ ಮಾಡಿವೆ. ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು, ನಿರುದ್ಯೋಗಿ ಯುವಕರಿಗೆ ಭತ್ಯೆ, ರೈತರ ಸಾಲ ಮನ್ನಾ, ಜಾತಿಗಣತಿ ವಿಷಯ ಸೇರಿದಂತೆ 25ಕ್ಕೂ ಹೆಚ್ಚು ಭರವಸೆಗಳ ಮಹಾಪೂರ ಹರಿಸಿವೆ. ಮತದಾರರ ಪ್ರಭುಗಳು ಯಾರ ಗ್ಯಾರಂಟಿಗೆ ಮತ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X