ರಾಯಚೂರು | ದೇವರ ಹೆಸರಲ್ಲಿ ಸರ್ಕಾರಿ ಶಾಲಾ‌ ಜಾಗ ಒತ್ತುವರಿ: ಮಧ್ಯರಾತ್ರಿ ತೆರವುಗೊಳಿಸಿದ ಪೊಲೀಸರು

Date:

Advertisements

ರಾಯಚೂರು ನಗರದ ಚಂದ್ರಬಂಡಾ ರಸ್ತೆಯ ಎಲ್ ಬಿ ಎಸ್ ನಗರದ ಸಂತೋಷ್ ನಗರ ಬಡಾವಣೆಯಲ್ಲಿ ಸರ್ಕಾರಿ ಫ್ರೌಢ ಶಾಲೆಗೆ ಮೀಸಲಿರಿಸಿದ ಜಾಗವನ್ನು ದೇವರ ಹೆಸರಿನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ಕಟ್ಟಡವನ್ನು ಮಂಗಳವಾರ ಮಧ್ಯರಾತ್ರಿ ಪೊಲೀಸರು ಬಿಗಿ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ್ದಾರೆ.

ನಗರಸಭೆಯವರು ಮೂರು ಕ್ರೇನ್ ಬಳಸಿ ಇಟ್ಟಿಗೆಯಿಂದ ನಿರ್ಮಿಸಿದ ಶೆಡ್ ಅನ್ನೂ ತೆರವು ಮಾಡಿದ್ದು, ಶಾಲಾ‌ ಜಾಗದಲ್ಲಿ ಇಟ್ಟಿದ್ದ ನಾಗ ದೇವರ ಮೂರ್ತಿಗಳನ್ನು ಕಾರಿನಲ್ಲಿ ಸುರಕ್ಷಿತವಾಗಿ ತೆಗೆದುಕೊಂಡು ಹೋಗಿದ್ದು, ಸ್ಥಳೀಯ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಲು ಚಿಂತನೆ ನಡೆಸಿದ್ದಾರೆ.

ಚಂದ್ರಬಂಡಾ ರಸ್ತೆಯ ಎಲ್‌ಬಿಎಸ್ ನಗರದ ಸಂತೋಷ್‌ ಬಡಾವಣೆಯ ಸರ್ವೆ ನಂ. 784/1 ರಲ್ಲಿ ವಸತಿ ಬಡಾವಣೆಗೆ ನಾಗರಿಕ ಸೌಲಭ್ಯದ ಕೋಟಾದಡಿ ಎಲ್ ಬಿ ಎಸ್ ನಗರದ ಸರ್ಕಾರಿ ಪ್ರೌಢ ಶಾಲೆಗೆ (ಕನ್ನಡ ಮಾಧ್ಯಮ) ಶಾಲಾ ಕಟ್ಟಡಕ್ಕಾಗಿ ಮೀಸಲಿಡಲಾಗಿತ್ತು.

Advertisements
1000037339

1017 ಚದರ ಮೀಟರ್‌ಗಿಂತ ಅಧಿಕ ಖಾಲಿ ನಿವೇಶನವನ್ನು ಬಡಾವಣೆಯ ಕೆಲವು ಪಟ್ಟಭದ್ರ ವ್ಯಕ್ತಿಗಳು ಸರ್ಕಾರಿ ಜಾಗದಲ್ಲಿ ಮನೆ ಕಟ್ಟುವ ಸಂದರ್ಭದಲ್ಲಿ ಅಕ್ರಮವಾಗಿ ಟಿನ್ ಶೆಡ್‌ ನಿರ್ಮಾಣ ಮಾಡಿದ್ದಾರೆ. ಅದಕ್ಕೆ ದೇವಸ್ಥಾನ ಮತ್ತು ದೇವರ ಸ್ವರೂಪವನ್ನು ನೀಡಿ ದೇವರ ಹೆಸರಿನಲ್ಲಿ ಸರ್ಕಾರಿ ಜಾಗವನ್ನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಸರ್ಕಾರಿ ಕನ್ನಡ ಶಾಲಾ ಉಳಿಸಿ ಹೋರಾಟ ಸಮಿತಿಯ ಮುಖಂಡರು, ಹೋರಾಟಗಾರರು, ರಾಯಚೂರು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದರು.

ಮನವಿಗೆ ಸ್ಪಂದಿಸಿದ್ದ ಜಿಲ್ಲಾಧಿಕಾರಿಗಳು, 15 -20 ದಿನದಲ್ಲಿ ಪೊಲೀಸ್ ಬಂದೋಬಸ್ತಿನೊಂದಿಗೆ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ನೀಡಿದ್ದ ಭರವಸೆಯಂತೆಯೇ ಮಂಗಳವಾರ ಮಧ್ಯರಾತ್ರಿ ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ಕಾರ್ಯ ನಿರ್ವಹಿಸಿ, ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

1000037345

ಹೋರಾಟಗಾರರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿ, ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳ ಮತ್ತು ಸಚಿವರ ಗಮನಕ್ಕೆ ತಂದಿದ್ದರು.

ಇದನ್ನು ಓದಿದ್ದೀರಾ? ಬೆಳಗಾವಿ | ಕಾರು ಅಡ್ಡಗಟ್ಟಿ ಹಣ ದರೋಡೆ ಪ್ರಕರಣಕ್ಕೆ ತಿರುವು​: ದೂರುದಾರ ಸೇರಿ ನಾಲ್ವರು ವಶಕ್ಕೆ!

ಯಾವುದೇ ಸಮಸ್ಯೆಯಾಗದಂತೆ ತೆರವುಗೊಳಿಸಿದ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಸರ್ಕಾರಿ ಕನ್ನಡ ಶಾಲಾ ಉಳಿಸಿ ಹೋರಾಟ ಸಮಿತಿಯ ಮುಖಂಡರು, ಹೋರಾಟಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X