ದಾಂಪತ್ಯದಲ್ಲಿ ಬಿರುಕು; ಒಡೆದ ಕನ್ನಡಿ ಮತ್ತೆ ಒಂದಾಗುವುದಿಲ್ಲ ಎಂದ ಎ ಆರ್‌ ರೆಹಮಾನ್‌

Date:

Advertisements

ಖ್ಯಾತ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್‌ ಮತ್ತು ಪತ್ನಿ ಸಾಯಿರಾ ಬಾನು ಸುಮಾರು ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 29 ವರ್ಷಗಳ ಬಳಿಕ ದಂಪತಿ ವಿಚ್ಛೇದನ ಘೋಷಿಸಿಕೊಂಡಿದ್ದಾರೆ.

ಸಾಯಿರಾ ಅವರ ವಕೀಲ ವಂದನಾ ಶಾ ಅವರು, ದಂಪತಿಯ ವಿಚ್ಛೇದನ ನಿರ್ಧಾರದ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. ಎ.ಆರ್.ರೆಹಮಾನ್ ಅವರು 1995 ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.

ಮದುವೆಯಾದ ಹಲವು ವರ್ಷಗಳ ನಂತರ, ಸಾಯಿರಾ ಅವರು ತಮ್ಮ ಪತಿ ಎ.ಆರ್.ರೆಹಮಾನ್ ಅವರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರವು ಅವರ ಸಂಬಂಧದಲ್ಲಿ ಗಮನಾರ್ಹವಾದ ಭಾವನಾತ್ಮಕ ಒತ್ತಡದ ನಂತರ ಬಂದಿದೆ. ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಹೇಳಿಕೊಂಡಿದ್ದಾರೆ. ಸಾಯಿರಾ ಅವರು ನೋವು ಮತ್ತು ಸಂಕಟದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವಕೀಲರಾದ ವಂದನಾ ಶಾ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ಕೀರ್ತಿಶನಿ’ಯನ್ನು ಮ್ಯಾನೇಜ್ ಮಾಡಲಾಗದೆ ಎದ್ದು ಹೋದರೆ ಗುರುಪ್ರಸಾದ್?

ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿರುವುದನ್ನು ದಂಪತಿ ಕಂಡುಕೊಂಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ಇಬ್ಬರ ಪೈಕಿ ಯಾರೂ ಕೂಡ ರಾಜಿಯಾಗಲು ಸಾಧ್ಯವಿಲ್ಲ ಎಂಬ ಭಾವನೆಯನ್ನು ಹೊಂದಿರುತ್ತಾರೆ. ಆದ್ದರಿಂದ ಸಾಯಿರಾ ಬಾನು ಮತ್ತು ಅವರ ಪತಿ ಎ ಆರ್ ರೆಹಮಾನ್ ಅವರು ಅತ್ಯಂತ ನೋವು ಮತ್ತು ವಿಷಾದ ಭಾವದಿಂದಲೇ ವಿಚ್ಛೇದನ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. 

ಪತ್ನಿ ಕಡೆಯಿಂದ ವಿಚ್ಚೇದನ ಪ್ರಕಟಣೆ ಬಂದ ನಂತರ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಎ ಆರ್ ರೆಹಮಾನ್, “ನಾವು 30 ವರ್ಷದ ಸಂಭ್ರಮವನ್ನು ಆಚರಿಸುತ್ತೇವೆ ಎಂಬ ಭರವಸೆಯಿತ್ತು. ಆದರೆ ಎಲ್ಲ ವಿಷಯಗಳು ಕಾಣದ ಅಂತ್ಯವನ್ನು ಹೊಂದಿವೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವು ನಡುಗಬಹುದು. ಒಡೆದ ಕನ್ನಡಿ ಮತ್ತೆ ಒಂದಾಗುವುದಿಲ್ಲ ಎಂದು ತಿಳಿದಿದ್ದರೂ ಈ ಬಿರುಕಿನಲ್ಲಿ ನಾವು ಅರ್ಥವನ್ನು ಹುಡುಕುತ್ತೇವೆ. ನಮ್ಮ ಈ ದುರ್ಬಲ ಕ್ಷಣಗಳಲ್ಲಿ ಸಾಗುವಾಗ ನಿಮ್ಮ ದಯೆ ಇರಲಿ ಮತ್ತು ನಮ್ಮ ಗೌಪ್ಯತೆಯನ್ನು ಗೌರವಿಸಿದ್ದಕ್ಕಾಗಿ ಸ್ನೇಹಿತರಾದ ನಿಮಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X