ರಾಯಚೂರು | ಪಿಡಿಓ ಪ್ರಶ್ನೆಪತ್ರಿಕೆ ಸೋರಿಕೆ: ಪ್ರತಿಭಟಿಸಿದ ಅಭ್ಯರ್ಥಿಗಳ ವಿರುದ್ಧದ ಕೇಸು ವಾಪಸ್‌ಗೆ ಆಗ್ರಹ

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಿಡಿಓ ಪರೀಕ್ಷೆ ನಿರ್ವಹಣೆ ಮಾಡುವಲ್ಲಿ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಕ್ರಾಂತಿಕಾರಿ ಯೋಜನೆ ಒಕ್ಕೂಟ (RYFI) ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಕರ್ನಾಟಕ ಲೋಕಸೇವಾ ಆಯೋಗದಿಂದ ಭಾನುವಾರ ಸಿಂಧನೂರು ಸರಕಾರಿ ಮಹಾವಿದ್ಯಾಲಯದಲ್ಲಿ ನಡೆದ ಪಿಡಿಒ ಹುದ್ದೆಗಳ ಪರೀಕ್ಷೆಯಲ್ಲಿ ಕೆಲ ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ಮಾಡಿದ್ದರು. ಲೋಪ ಎಸಗಿದ ಅಧಿಕಾರಿಗಳಿಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳು ಉನ್ನತ ಹುದ್ದೆಗೋಸ್ಕರ ಹಗಲು ರಾತ್ರಿ ಕಷ್ಟಪಟ್ಟು, ಸತತ ಪ್ರಯತ್ನ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಿರುತ್ತಾರೆ. ಆದರೆ ಕೆಲವರ ಕುತಂತ್ರಕ್ಕೆ ಸಾವಿರಾರು ಮಕ್ಕಳು ಉನ್ನತ ಹುದ್ದೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

Advertisements

ಪ್ರತಿಬಾರಿಯು ಕೆ ಪಿ ಎಸ್ ಸಿ ಯಾವುದೇ ಪರೀಕ್ಷೆ ನಡೆಸುವಾಗ ಲೋಪವೆಸಗುವ ಘಟನೆಗಳು ಪದೇ ಪದೇ ನಡೆಯುತ್ತಿವೆ. ಪಿ ಎಸ್ ಐ ಇನ್ನಿತರ ಉದಾಹರಣೆಗಳಿವೆ. ಕೂಡಲೇ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಲೋಪ‌ ಎಸಗಿದ ಅಧಿಕಾರಿಗಳಿಗೆ ಅಮಾನತು ಮಾಡಬೇಕು ಎಂದರು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಪ್ರತಿ ಸಮಸ್ಯೆಗೂ ರೈತರು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ: ಕೆಂಪೂಗೌಡ

ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಧ್ವನಿ ಎತ್ತಿದ್ದಕ್ಕೆ 12 ಅಭ್ಯರ್ಥಿಗಳನ್ನು ಕೇಸು ದಾಖಲಿಸಿ ಒಬ್ಬ ಅಭ್ಯರ್ಥಿಯನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದರು. ಕೂಡಲೇ ವಿದ್ಯಾರ್ಥಿಗಳ ಮೇಲೆ ಹಾಕಿದ ಕೇಸ್ ವಾಪಸ್ ಪಡೆದು ಕೂಡಲೇ ಮರು ಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾರತ ಕ್ರಾಂತಿಕಾರಿ ಯೋಜನೆ ಒಕ್ಕೂಟ ಜಿಲ್ಲಾ ಮುಖಂಡ ಅಜೀಜ್ ಜಾಗೀರ್ದಾರ್, ಕಾರ್ಮಿಕ ಮುಖಂಡ ಅಡಿವಿ ರಾವ್, ರವಿಚಂದ್ರ, ರೈತ ಮುಖಂಡ ಸೈಯದ್ ಅಬ್ಬಾಸ್ ಅಲಿ, ಹನೀಫ್ ಅಬಕಾರಿ, ಶಫಿ, ನಲ್ಲಾರೆಡ್ಡಿ, ನರಸಪ್ಪ, ನಾಗರಾಜ್ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X