ನಕ್ಸಲ್ ವಿಕ್ರಂ ಗೌಡ‌ ಬಳಿ ಅಪಾಯಕಾರಿ ಶಸ್ತ್ರಾಸ್ತ್ರ ಸಂಗ್ರಹವಿತ್ತು: ಸಚಿವ ಪರಮೇಶ್ವರ್

Date:

Advertisements

ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಕ್ರಂ‌ ಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು. ಇದಕ್ಕೆ ವಿಕ್ರಂ ಗೌಡ ಒಪ್ಪಿರಲಿಲ್ಲ” ಎಂದರು.

“ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೊಂಬಿಂಗ್ ನಡೆಸಲಾಗಿತ್ತು. ಅವರನ್ನು ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

ಎನ್‌ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, “ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ” ಎಂದು ಹೇಳಿದರು‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X