ಹೊಸೂರು | ಕೋರ್ಟ್ ಆವರಣದಲ್ಲೇ ವಕೀಲನನ್ನು ಕೊಚ್ಚಿ ಕೊಲೆಗೈದ ಸಹಾಯಕ

Date:

Advertisements

ನ್ಯಾಯಾಲಯದ ಆವರಣದಲ್ಲಿಯೇ ವಕೀಲನನ್ನು ವ್ಯಕ್ತಿಯೊಬ್ಬ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ತಮಿಳುನಾಡಿದ ಹೊಸೂರಿನಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹತ್ಯೆಗೆ ಬಲಿಯಾದ ವಕೀಲನನ್ನು ಕಣ್ಣನ್ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಆನಂದ್‌ ಎಂದು ಹೇಳಲಾಗಿದೆ. ಈತ, ಕೋರ್ಟ್‌ ಆರವರಣದಲ್ಲಿ ಸಹಾಯಕ ಕೆಲಸ ಮಾಡುತ್ತಿದ್ದ ಎಂದು ವರದಿಯಾಗಿದೆ.

ಕೋರ್ಟ್‌ ಆವರಣದಲ್ಲಿಯೇ ಕಣ್ಣನ್ ಮೇಲೆ ಆನಂದ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಲೆಗೆ ಮಚ್ಚಿನಿಂದ ಬಲವಾದ ಪೆಟ್ಟು ಬಿದ್ದಿದೆ. ಹಲ್ಲೆ ವೇಳೆ, ಯಾರೊಬ್ಬರೂ ಕಣ್ಣನ್ ರಕ್ಷಣೆಗೆ ಹೋಗಿಲ್ಲ. ಆರೋಪಿ ಸ್ಥಳದಿಂದ ತೆರಳಿದ ಬಳಿಕ, ರಕ್ತದ ಮಡುವಿನಲ್ಲಿ ಬಿದ್ದದ್ದ ವಕೀಲ ಕಣ್ಣನ್‌ರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದರೂ, ಕಣ್ಣನ್ ಮೃತಪಟ್ಟಿದ್ದಾರೆ.

Advertisements

ಘಟನಾ ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತ್ನಿ ಮತ್ತು ಕಣ್ಣನ್ ನಡುವೆ ವಿವಾಹೇತರ ಸಂಬಂಧವಿತ್ತು. ಅದೇ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ, ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗಷ್ಟೇ ದೆಹಲಿಯ ನ್ಯಾಯಾಲಯವೊಂದರಲ್ಲಿ ವಕೀಲರ ಮೇಲೆ ಗುಂಡು ಹಾರಿಸಲಾಗಿತ್ತು. ಬೀದರ್‌ನಲ್ಲಿ ವಕೀಲನನ್ನು ಕೊಲೆ ಮಾಡಲಾಗಿತ್ತು. ಹಾಸನದಲ್ಲಿ ವಕೀಲರೊಬ್ಬರನ್ನು ಕೋರ್ಟ್ ಕೆಲಸ ಮುಗಿಸಿ ಹೋಗುವಾಗ ಅಪಹರಿಸಿ, ಹತ್ಯೆ ಮಾಡಲಾಗಿತ್ತು. ಇದೀಗ, ಹೊಸೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X