ಉಡುಪಿ | ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಪ್ರಕಟ; ನಾಮಪತ್ರ ಸಲ್ಲಿಕೆಗೆ ನ. 27 ಕೊನೆಯ ದಿನ

Date:

Advertisements

1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಉಪಬಂಧಗಳ ಮೇರೆಗೆ ಜಿಲ್ಲೆಗೆ ಸಂಬಂಧಿಸಿದಂತೆ 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗುತ್ತಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಎ ಮತ್ತು 308 ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಮತ್ತು ಮೀಸಲಾತಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ನವೆಂಬರ್ 21ರಂದು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 27 ಕೊನೆಯ ದಿನವಾಗಿದೆ. ನವೆಂಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದೆ.

ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ನವೆಂಬರ್ 30 ಕೊನೆಯ ದಿನವಾಗಿದ್ದು, ಡಿಸೆಂಬರ್ 8 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಕಾರ್ಯವು ಡಿಸೆಂಬರ್ 11 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.

Advertisements

ಇದನ್ನು ಓದಿದ್ದೀರಾ? ವಿಕ್ರಂ ಗೌಡ ಶೂಟೌಟ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ : ನೂರ್‌ ಶ್ರೀಧರ್‌, ಸಿರಿಮನೆ ನಾಗರಾಜ್‌ ಆಗ್ರಹ

ಮೀಸಲಾತಿ ವಿವರ

ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಗಂಗೊಳ್ಳಿ-1 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 5 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ ಮಹಿಳೆ (1), ಸಾಮಾನ್ಯ (2) ಹಾಗೂ ಸಾಮಾನ್ಯ ಮಹಿಳೆ (2), ಗಂಗೊಳ್ಳಿ-2 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ (2), ಸಾಮಾನ್ಯ (1) ಹಾಗೂ ಸಾಮಾನ್ಯ ಮಹಿಳೆ (1), ಗಂಗೊಳ್ಳಿ-3 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಅನುಸೂಚಿತ ಪಂಗಡ ಮಹಿಳೆ (1), ಹಿಂದುಳಿದ ವರ್ಗ ಅ ಮಹಿಳೆ (1), ಹಿಂದುಳಿದ ವರ್ಗ ಬ ಮಹಿಳೆ (1) ಹಾಗೂ ಸಾಮಾನ್ಯ (1), ಗಂಗೊಳ್ಳಿ-4 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಅನುಸೂಚಿತ ಜಾತಿ (1), ಹಿಂದುಳಿದ ವರ್ಗ ಅ (1) ಹಾಗೂ ಸಾಮಾನ್ಯ ಮಹಿಳೆ (2), ಗಂಗೊಳ್ಳಿ-5 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ ಮಹಿಳೆ (1), ಸಾಮಾನ್ಯ (2) ಹಾಗೂ ಸಾಮಾನ್ಯ ಮಹಿಳೆ (1), ಗಂಗೊಳ್ಳಿ-6 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 5 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ ಮಹಿಳೆ (1), ಹಿಂದುಳಿದ ವರ್ಗ ಬ (1), ಸಾಮಾನ್ಯ (1) ಹಾಗೂ ಸಾಮಾನ್ಯ ಮಹಿಳೆ (2), ಗಂಗೊಳ್ಳಿ-7 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 3 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ (1) ಹಾಗೂ ಸಾಮಾನ್ಯ (2) ಮತ್ತು ಗಂಗೊಳ್ಳಿ-8 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಅನುಸೂಚಿತ ಜಾತಿ ಮಹಿಳೆ (1), ಹಿಂದುಳಿದ ವರ್ಗ ಅ (1), ಸಾಮಾನ್ಯ (1) ಹಾಗೂ ಸಾಮಾನ್ಯ ಮಹಿಳೆ (1) ಮೀಸಲಾತಿಯನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X