ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ: ಜಾಗೃತ ಕರ್ನಾಟಕ ಅಭಿನಂದನೆ

Date:

Advertisements

ಹಿರಿಯರು, ವಿದ್ವಾಂಸರು ಆಗಿರುವ ಗೊ.ರು ಚನ್ನಬಸಪ್ಪ ಅವರನ್ನು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಜಾಗೃತ ಕರ್ನಾಟಕ ಸಂಘಟನೆ ಅಭಿನಂದಿಸಿದೆ.

ಜನಪದ ತಜ್ಞರು ಆದ ಗೊ.ರು.ಚ ಅವರು ಈ ಹಿಂದೆ ಕಸಾಪ ಅಧ್ಯಕ್ಷರಾಗಿಯೂ ಸಹ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಜೀವಪರ ಚಿಂತನೆಗಳ ಪರವಾಗಿ ಸದಾ ನಿಂತಿರುವವರು. ಗೊ.ರು.ಚ ಅವರು ಜಾತ್ಯತೀತವಾಗಿ ಮತ್ತು ಬಸವತತ್ವದ ಪರವಾಗಿ ನಿಂತ ಹಿರಿಯ ಸಾಹಿತಿಯಾಗಿದ್ದಾರೆ. ಅವರು ಸಮ್ಮೇಳನಾಧ್ಯಕ್ಷರಾಗಿರುವುದು ಸಮಯೋಚಿತವಾಗಿದೆ.

ಇದುವರೆಗೂ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಹಲವಾರು ವಿವಾದಗಳು ಸಂಭವಿಸಿದ್ದವು. ಆದರೆ ಸಮ್ಮೇಳನಾಧ್ಯಕ್ಷರ ಆಯ್ಕೆ ವಿವಾದ ರಹಿತವಾಗಿ, ಅರ್ಥಪೂರ್ಣವಾಗಿ ನಡೆದಿರುವುದಕ್ಕೆ ಆಯ್ಕೆ ಸಮಿತಿಗೆ ಜಾಗೃತ ಕರ್ನಾಟಕ ಅಭಿನಂದನೆ ಸಲ್ಲಿಸುತ್ತದೆ.

Advertisements
IMG 20241120 WA0031

ಇದನ್ನು ಓದಿದ್ದೀರಾ? ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಬೆಂಬಲ ಅವಶ್ಯ : ಸಚಿವ ಚಲುವರಾಯಸ್ವಾಮಿ

ಕನ್ನಡದ ನೆಲದ ಪರಂಪರೆ ಸರ್ವಜನಾಂಗದ ಶಾಂತಿಯ ತೋಟದ ಪರಿಕಲ್ಪನೆ ನೀಡಿದ ಕುವೆಂಪುರವರ ವಿಚಾರ ಮತ್ತು ಬಸವತತ್ವದ ವಿಚಾರಗಳ ಕುರಿತು ಹೆಚ್ಚು ಚರ್ಚೆಯಾಗಬೇಕು. ಮಂಡ್ಯ ಜಿಲ್ಲೆಯ ಸಮಸ್ಯೆಗಳು ಹಾಗೂ ಮಂಡ್ಯದ ಸಮಗ್ರ ಅಭಿವೃದ್ದಿಯ ಮುನ್ನೋಟದ ಕುರಿತಂತೆ ಗೋಷ್ಠಿಗಳೊಂದಿಗೆ, ಅರ್ಥಪೂರ್ಣ ಸಮ್ಮೆಳನ ಇದಾಗಲಿ ಎಂದು ಜಾಗೃತ ಕರ್ನಾಟಕದ ಸಂತೋಷ್ ಜಿ, ನಾಗೇಶ್ ಎನ್, ಪೃಥ್ವಿರಾಜ್, ಸುಬ್ರಮಣ್ಯ, ನಗರಕೆರೆ ಜಗದೀಶ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X