ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

Date:

Advertisements

ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಮೀನು ಸಾಗಾಟದ ರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ ಹಾಗೂ ಲಾರಿಯ ಚಾಲಕ ಸೇರಿ ಒಟ್ಟು ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ನಡೆದಿದೆ.

ಘಟನೆಯು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಶಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ. ಘಟನೆಯ ಭೀಕರ ದೃಶ್ಯವು ಹೊಟೇಲೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಗಂಭೀರ ಗಾಯಗೊಂಡಿರುವ ಎಂಟು ಮಂದಿಯನ್ನು ಕೂಡ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಶಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರು.

Advertisements

ಇದನ್ನು ಓದಿದ್ದೀರಾ? ಉಡುಪಿ | ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಪ್ರಕಟ; ನಾಮಪತ್ರ ಸಲ್ಲಿಕೆಗೆ ನ. 27 ಕೊನೆಯ ದಿನ

ಇದೇ ಸಂದರ್ಭ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆಯ ಹೊನ್ನಾವರ ಮೂಲದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿರುವ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಪ್ರಸಾದ್‌ ಕುಮಾರ್ ಕೆ, “ಇನ್ನೋವಾ ಕಾರಿನಲ್ಲಿದ್ದವರೆಲ್ಲರೂ ಕೇರಳ ಮೂಲದವರು. ಕೊಲ್ಲೂರು ದೇವಸ್ಥಾನ ನೋಡಿಕೊಂಡು ಬರುವಾಗ ರಸ್ತೆಯಲ್ಲಿ ಈ ಸಂದರ್ಭ ಕುಂಭಾಶಿಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಮೀನಿನ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯ ವೇಳೆ ಇನ್ನೋವಾ ಕಾರಿನಲ್ಲಿ ಚಾಲಕ ಸೇರಿ 4 ಮಂದಿ ಪುರುಷರು, ಮೂವರು ಮಹಿಳೆಯರಿದ್ದರು. ಇನ್ನೋವಾ ಕಾರಿನಲ್ಲಿದ್ದವರೆಲ್ಲರೂ ದಂಪತಿಗಳು. ಅವರ ವಿವರಗಳನ್ನು ಕಲೆ ಹಾಕಿ, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದೇವೆ. ಅವರು ಈಗಾಗಲೇ ಊರಿನಿಂದ ಹೊರಟಿದ್ದಾರೆ. ಮೀನಿನ ಲಾರಿಯ ಚಾಲಕ ಮಹೇಶ್ ಎಂಬುವವರಿಗೂ ಗಾಯಗಳಾಗಿದೆ” ಎಂದು ತಿಳಿಸಿದ್ದಾರೆ.

ಕುಂದಾಪ್ರ
ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಪ್ರಸಾದ್‌ ಕುಮಾರ್ ಕೆ

“ಎಂಟು ಮಂದಿಯ ಪೈಕಿ ನಾಲ್ಕು ಜನ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮೀನಿನ ಲಾರಿಯ ಚಾಲಕ ಮಹೇಶ್ ಸೇರಿ ನಾಲ್ಕು ಜನ ಕುಂದಾಪುರದ ಎನ್ ಅರ್ ಆಚಾರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸಂಬಂಧ ಈಗಾಗಲೇ ಎಫ್‌ಆಐರ್ ದಾಖಲಿಸಿಕೊಂಡಿದ್ದೇವೆ” ಎಂದು ಸಬ್‌ ಇನ್ಸ್‌ಪೆಕ್ಟರ್‌ ಪ್ರಸಾದ್‌ ಮಾಹಿತಿ ನೀಡಿದ್ದಾರೆ.

ಲಾರಿ 6

WhatsApp Image 2024 11 20 at 9.06.36 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X