ಮೈಸೂರು | ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆ ಮುಂದೂಡುವಂತೆ ಎಐಡಿಎಸ್ಒ ಪ್ರತಿಭಟನೆ

Date:

Advertisements

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಪಾಠ ಪ್ರವಚನಗಳು ಮುಗಿಯದೇ ಇರುವುದರಿಂದ, ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಮೈಸೂರು ವಿ ವಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, “ಮೈಸೂರು ವಿಶ್ವವಿದ್ಯಾನಿಲಯದ ಯುಜಿ ವಿದ್ಯಾರ್ಥಿಗಳ ಪರೀಕ್ಷಾ ನೋಟಿಫಿಕೇಶನ್ ಪ್ರಕಾರ ಡಿಸೆಂಬರ್ 28ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆಯೆಂದು ತಿಳಿಸಿದ್ದಾರೆ. ಆದರೆ ಕಾಲೇಜುಗಳಲ್ಲಿ ಆಗಸ್ಟ್‌ನಲ್ಲೇ ತರಗತಿಗಳು ಪ್ರಾರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಮತ್ತು ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲದ ಕಾರಣ ತರಗತಿಗಳು ನಡೆದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ದೇಶಾದ್ಯಂತ ರೈಲ್ವೆ ಯೂನಿಯನ್ ಮಾನ್ಯತೆಗೆ ಡಿ.4 ರಿಂದ 6ರವರೆಗೆ ಚುನಾವಣೆ

Advertisements

“ಒಂದೂವರೆ ತಿಂಗಳಿನ ನಂತರ ತರಗತಿಗಳು ಪ್ರಾರಂಭವಾಗಿವೆ. ಇದರಿಂದ ಪಠ್ಯಕ್ರಮಗಳ ಬೋಧನೆ ಸಂಪೂರ್ಣವಾಗಿ ಮುಗಿದಿಲ್ಲ. ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಅಲ್ಲದೆ ಇದು ವಿದ್ಯಾರ್ಥಿಗಳ ಮೇಲೆ ಒತ್ತಡವನ್ನುಂಟು ಮಾಡುತ್ತದೆ. ಆದ್ದರಿಂದ ಪರೀಕ್ಷೆಗಳನ್ನು ಮುಂದೂಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ನಿತಿನ್, ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಾದ ಉಮೇಶ್, ಮನೋಜ್, ಕಿರಣ್ ಕುಮಾರ್, ಮಹದೇವ್, ಸಂತೋಷ್, ಪೂಜಾ, ಕವನ, ರಾಧಿಕಾ ಹಾಗೂ ಇತರ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X