ಪಬ್ಲಿಕ್ ಸ್ಕೂಲ್-ಪ್ರೀ ನರ್ಸರಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದ ಬಿಬಿಎಂಪಿ

Date:

Advertisements
  • ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಕೊನೆಯ ದಿನಾಂಕ
  • ಏಪ್ರಿಲ್ 29ರಂದು ಪ್ರೀ ನರ್ಸರಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ ಪಠ್ಯಕ್ರಮ)ಗೆ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಬಿಬಿಎಂಪಿ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಪಾಲಿಕೆ ಜಂಟಿ ಆಯೋಗದಲ್ಲಿ ಪ್ರೀ ನರ್ಸರಿ ತರಗತಿಗಳು ನಡೆಯಲಿವೆ. ಇದಕ್ಕಾಗಿ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ.

ಅರ್ಜಿಗಳನ್ನು ಮಾರ್ಚ 27 ರಿಂದ ಏಪ್ರಿಲ್ 10 ರವರೆಗೆ ಭಾರತೀಯ ವಿದ್ಯಾಭವನ ಬಿಬಿಎಂಪಿ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21ನ ವಿದ್ಯಾಸಂಸ್ಥೆಯಲ್ಲಿ ಶಿಶುವಿಹಾರಕ್ಕೆ ಅರ್ಜಿಗಳನ್ನು ವಿತರಿಸಲಾಗುವುದು ಎಂದು ಪಾಲಿಕೆ ಪ್ರಕಟಣೆ ಹೊರಡಿಸಿದೆ.

Advertisements

ಅರ್ಜಿ ನಮೂನೆಗಳನ್ನು ಸಲ್ಲಿಸಲು ಏ. 11 ರಿಂದ ಏ. 25 ರವೆಗೆ ಅವಕಾಶ ನೀಡಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. ಏಪ್ರಿಲ್ 29ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು

  • ಮಗುವಿನ ಪಾಸ್ ಪೋಟ್೯ ಸೈಜ್ ಫೋಟೋ – 5 ಸಂಖ್ಯೆ
  • ಮಗುವಿನ ಜೊತೆಗಿರುವ ತಂದೆ ತಾಯಿಯ ಭಾವಚಿತ್ರ(ಕುಟುಂಬ ಭಾವ ಚಿತ್ರ)
  • ಮಗುವಿನ ಜನನ ಪ್ರಮಾಣ ಪತ್ರ
  • ಅದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ತಂದೆ / ತಾಯಿಯ ಆಧಾರ್ ಕಾರ್ಡ್ ಜೆರಾಕ್ಸ್
  • ಮಗುವಿನ ಆಧಾರ್ ಕಾರ್ಡ್ ಜೆರಾಕ್ಸ್
  • ತಂದೆ / ತಾಯಿಯ ಖಾಯಂ ವಿಳಾಸವಿರುವ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿ(ಭಾರತೀಯ ವಿದ್ಯಾಭವನ ಶಾಲೆಗೆ 3 ಕಿ.ಲೋ. ಸುತ್ತಮುತ್ತಲಿನ ಅಂತರದಲ್ಲಿ ವಾಸವಾಗಿರಬೇಕು.)
  • ಮಗುವಿನ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು(ಎತ್ತರ, ತೂಕ, ರಕ್ತದ ಗುಂಪು)

ಸೂಚನೆ

ಅರ್ಜಿ ಪರಿಶೀಲನೆಯ ದಿನ(ದಿ: 29-04-2023) ಪೋಷಕರು ಮಗುವಿನ ಜೊತೆಗೆ ದಾಖಲಾತಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳನ್ನು ತರುವುದು ಕಡ್ಡಾಯ ಎಂದು ಪಾಲಿಕೆ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X