ಚಿಲುಮೆ ವೋಟರ್‌ ಗೇಟ್‌ ಪ್ರಕರಣ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯಗೆ ರಮೇಶ್‌ ಬಾಬು ಆಗ್ರಹ

Date:

Advertisements
  • ಬಿಬಿಎಂಪಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಮತದಾರರ ಪಟ್ಟಿ ಲೋಪ
  • ರಾಜ್ಯ ಸರ್ಕಾರ ಯಾವುದೇ ಪ್ರಭಾವಕ್ಕೆ ಒಳಗಾಗದೆ ಉನ್ನತ ತನಿಖೆ ನಡೆಸಬೇಕು’

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಅವರು ಚಿಲುಮೆ ಸಂಸ್ಥೆಯ ಮೂಲಕ ಎಸಗಿದ ಮತದಾರರ ಪಟ್ಟಿಯ ಲೋಪವನ್ನು ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಪತ್ರ ಬರೆದಿರುವ ಅವರು, “ಬಿಬಿಎಂಪಿ ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿ ಪಾಲಿಕೆಯ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಅವರು ಚಿಲುಮೆ ಖಾಸಗಿ ಸಂಸ್ಥೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ ಲೋಪವೆಸಗಿ, ಈ ಮೂಲಕ ಬಿಬಿಎಂಪಿ ವ್ಯಾಪ್ತಿಯ ಸುಮಾರು ನಾಲ್ಕರಿಂದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣರಾಗಿದ್ದಾರೆ” ಎಂದು ದೂರಿದ್ದಾರೆ.

“ಚಿಲುಮೆ ಸಂಸ್ಥೆಯ ಲೋಪದ ಸಂಬಂಧ ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿ ವರದಿಯನ್ನು ಪಡೆದುಕೊಂಡಿದ್ದರೂ ಈ ತನಿಖೆ ಪೂರ್ಣ ಪ್ರಮಾಣದಲ್ಲಿ ಆಗಿರುವುದಿಲ್ಲ. ತುಶಾರ್ ಗಿರಿನಾಥ್‌ ಅವರು ಕರ್ತವ್ಯಲೋಪ ಎಸಗಿದ್ದು, ಇವರು ಮಾಡಿರುವ ತಪ್ಪಿನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಚುನಾವಣಾ ಅಧಿಕಾರಿಯಾಗಿ ಇವರ ಕರ್ತವ್ಯಲೋಪವನ್ನು ಬೇರೆ ಅಧಿಕಾರಿಗಳ ಮೇಲೆ ವರ್ಗಾಯಿಸಲೂ ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

Advertisements

“ಉನ್ನತ ಮಟ್ಟದ ತನಿಖೆಯ ಮೂಲಕ ಇವರ ಅಕ್ರಮ ಬಯಲುಗೊಳಿಸುವುದರ ಜೊತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೆ ಮತ್ತೆ ಇಂತಹ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ರಾಜ್ಯ ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗದೆ ಇವರ ಮೇಲೆ ಪೂರ್ಣ ಮಟ್ಟದ ತನಿಖೆಯನ್ನು ನಡೆಸಬೇಕು. ತಾವು ದಯಮಾಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತ ತುಶಾರ್ ಗಿರಿನಾಥ್‌ ಮೂಲಕ ಆಗಿರುವ ಮತದಾರರ ಪಟ್ಟಿಯ ಲೋಪವನ್ನು ತನಿಖೆ ಮಾಡಲು ನಿರ್ದೇಶನ ನೀಡಬೇಕು” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X