ರಾಯಚೂರು | ಸೀಟ್ ಸಿಗದಕ್ಕೆ ಬಸ್ ಮೇಲೆ ಕಲ್ಲು ತೂರಾಟ; ತಪ್ಪೊಪ್ಪಿಕೊಂಡ ಬಂಧಿತ ಆರೋಪಿ

Date:

Advertisements

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ವ್ಯಾಪ್ತಿಯ ಗೋಲಪಲ್ಲಿ ಬಳಿ ನ.18 ರಂದು ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ತೂರಾಟದಿಂದ ಸಾರಿಗೆ ಸಂಸ್ಧೆಯ 3 ಬಸ್‌ಗಳ ಗಾಜು ಒಡೆದು ಹೋಗಿದ್ದವು. ಈ ಕುರಿತು ಚಿತ್ತಾಪೂರ ಘಟಕದ ಬಸ್ ಚಾಲಕ ಭದ್ರಪ್ಪ ಎಂಬುವರು ಸಾರಿಗೆ ಸಂಸ್ಥೆಯ ಮೂರು ಬಸ್‌ಗಳ 79 ಸಾವಿರ ಮೌಲ್ಯದ ಕಿಟಕಿ, ಬಸ್ಸಿನ ಮುಂಭಾಗದ ಗಾಜು ಒಡೆದು ಹಾನಿಯಾಗಿದೆ ಕುರಿತು ಹಟ್ಟಿ ಠಾಣೆಯಲ್ಲಿ ದೂರು‌ ನೀಡಿದ್ದರು.ದೂರಿನ ಅನ್ವಯ ಪೊಲೀಸರು ದಮತೋರು ದೊಡ್ಡಿಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆತನನ್ನು ಪೊಲೀಸರು ತನಿಖೆ ಮಾಡಿದಾಗ, ʼಅಕ್ಕ ಮಾವನನ್ನು ತಮ್ಮ ಸಂಬಂಧಿಕರೊಂದಿಗೆ ಬೆಂಗಳೂರಿಗೆ ಕಳುಹಿಸಲು ಗುರುಗುಂಟ ಗ್ರಾಮಕ್ಕೆ ಬಂದಿದ್ದೆ, ಬಸ್ಸುಗಳು ನಿಲ್ಲಿಸದೆ ಇರುವುದಕ್ಕೆ ಹಾಗೂ ಕೂರಲು ಆಸನ ಸಿಗದೇ ಇರುವುದಕ್ಕೆ ಅಸಮಧಾನಗೊಂಡು ವಾಪಸ್ ಮನೆಗೆ‌ ಕರೆದುಕೊಂಡು ಹೋಗಬೇಕಾಯಿತು. ನಂತರ 4 ಜನ ಸ್ನೇಹಿತರು ಗೋಲಪಲ್ಲಿ ಗುಡ್ಡದಲ್ಲಿ ರಾತ್ರಿ ಪಾರ್ಟಿ ಮಾಡಿ ಕುಡಿದ ಅಮಲಿನಲ್ಲಿ ಮಂಗಳವಾರ ರಾತ್ರಿ 1.30 ಗಂಟೆ ಸುಮಾರಿಗೆ ಬಸ್ ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ನಡೆಸಿ ಪರಾರಿಯಾಗಿದ್ದೇವೆʼ ಎಂದು ಆರೋಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಬಾರ್ಡ್ ಸಾಲ ಖೋತಾ ಮಾಡಿದ ಮೋದಿ ಸರ್ಕಾರ ರೈತಪರವೇ?

ಇನ್ನುಳಿದ 4 ಜನ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X