‌ಚಿತ್ರದುರ್ಗ | ಶೌಚಾಲಯ ಬಳಕೆಗೆ ಪ್ರೇರೇಪಿಸಲು ನಿರಂತರವಾಗಿ ಒತ್ತು ನೀಡಲಾಗುವುದು: ಸಿಇಒ ಎಸ್ ಜೆ ಸೋಮಶೇಖರ್

Date:

Advertisements

ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ ಹಾಗೂ ಬಹಿರ್ದೇಸೆ ಮುಕ್ತ ವಾತಾವರಣ ಸೃಷ್ಟಿಸಿ, ನಿರಂತರವಾಗಿ ಶೌಚಾಲಯಗಳನ್ನು ಬಳಸಲು ಪ್ರೇರೇಪಿಸಲು ಒತ್ತು ನೀಡುವುದಾಗಿ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಿಇಒ ಎಸ್ ಜೆ ಸೋಮಶೇಖರ್ ಹೇಳಿದರು.

ಚಿತ್ರದುರ್ಗ ನಗರದ ಜಿ ಪಂ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ, ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ‘ನಮ್ಮ ಶೌಚಾಲಯ ನಮ್ಮ ಗೌರವ’ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, “ನವೆಂಬರ್‌ 19ರಿಂದ ಡಿಸೆಂಬರ್‌ 20ರವರೆಗೆ ಜಿಲ್ಲಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಈ ಘೋಷ ವಾಕ್ಯದೊಂದಿಗೆ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು” ಎಂದು ತಿಳಿಸಿದರು.

“ಜಿಲ್ಲೆಯಲ್ಲಿ ಬಳಕೆಯಲ್ಲಿರದ ಸಮುದಾಯ ಶೌಚಾಲಯಗಳನ್ನು ಗುರುತಿಸಿ, ದುರಸ್ಥಿಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತ ಮಾಡಲಾಗುವುದು. ಶೌಚಾಲಯಗಳ ಕೊರತೆಯಿರುವ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಲಾಗುವುದು. ಸ್ವಚ್ಛತೆ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಆರೋಗ್ಯ ಶಿಬಿರ ಆಯೋಜಿಸಿ, ಸುರಕ್ಷಾ ಪರಿಕರಗಳನ್ನು ವಿತರಿಸುವುದರ ಜತೆಗೆ ಗೌರವಿಸಲಾಗುವುದು” ಎಂದು ಜಿ ಪಂ ಸಿಇಒ ಎಸ್ ಜೆ ಸೋಮಶೇಖರ್ ತಿಳಿಸಿದರು.

Advertisements

“ಈಗಾಗಲೇ ಜಿಲ್ಲೆಯನ್ನು ಬಯಲು ಶೌಚಮುಕ್ತ ಪ್ರದೇಶವೆಂದು ಘೋಷಿಸಲಾಗಿದೆ. ಪ್ರಸಕ್ತ ವರ್ಷ 16 ಸಾವಿರ ಶೌಚಾಲಯಗಳ ನಿರ್ಮಾಣದ ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಹಳ್ಳಿಗಳಲ್ಲಿ ಶೌಚಾಲಯ ಹೊಂದಿರದವರು ಶೌಚಾಲಯ ಕಟ್ಟಿಸಿಕೊಳ್ಳಲು ಮುಂದೆ ಬಂದರೆ ಅವರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗುವುದು. ಸಾರ್ವಜನಿಕರು ಸಿಟಿಜನ್ ಪೋರ್ಟಲ್‌ನಲ್ಲಿ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ನೇರವಾಗಿ ಭೇಟಿ ನೀಡಬಹುದು. ಆಯ್ಕೆಯಾದ ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ₹20,000 ಇತರೆ ಫಲಾನುಭವಿಗಳಿಗೆ ₹12,000 ಸಹಾಯಧನ ನೀಡಲಾಗುವುದು” ಎಂದು ಜಿ ಪಂ ಸಿಇಒ ಎಸ್ ಜೆ ಸೋಮಶೇಖರ್ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಇಂದಿರಾಗಾಂಧಿ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕಂಡ ಧೀಮಂತ ನಾಯಕಿ: ಮಲ್ಲಿಕಾರ್ಜುನ ಎಸ್ ಲೋಣಿ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಮಹಿಳೆಯರ ಶೌಚಾಲಯವನ್ನು ಉದ್ಘಾಟಿಸಿದರು. ಡಿ ಎಸ್ ಹಳ್ಳಿ ಗ್ರಾಮ ಪಂಚಾಯಿತಿಯ ಮೂವರು ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣದ ಕಾರ್ಯಾದೇಶ ನೀಡಿದರು.

ಜಿ.ಪಂ.ಮುಖ್ಯ ಯೋಜನಾಧಿಕಾರಿ ಗ್ರಾಯಿತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಎಸ್ ಬಿಎಂ ಸಮಾಲೋಚಕಿ ಪ್ರಮೀಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X