ಕಲಬುರಗಿ | ₹1.76 ಕೋಟಿ ಅನಿರ್ಬಂಧಿತ ಅನುದಾನದ ದುರ್ಬಳಕೆ; ತನಿಖೆಗೆ ದಲಿತ ಸೇನೆ ಆಗ್ರಹ

Date:

Advertisements

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ 2023-24ನೇ ಸಾಲಿನ ತಾಲೂಕು ಪಂಚಾಯತ್ ಯೋಜನೆಗಳಾದ ಅನಿ‌ರ್ಬಂಧಿತ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ದಲಿತ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಚಿಂಚೋಳಿ ನಗರದ ತಾಂಡುರ್ ಕ್ರಾಸ್‌ನಿಂದ ತಹಶೀಲ್ದಾರ್‌ ಕಚೇರಿವರಗೆ ದಲಿತ ಸೇನೆ ಸಮಿತಿಯಿಂದ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಮುಖಾಂತರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದರು.‌

ಯುವಮೋರ್ಚಾ ತಾಲೂಕು ಅಧ್ಯಕ್ಷ ಚೇತನ್ ನಿರಾಳಕರ್ ಮಾತನಾಡಿ, “ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಂಕರ ರಾಠೋಡ ಸೇರಿದಂತೆ ಸಂಬಂಧಪಟ್ಟ ಜೆಇ, ಎಇಇ ಮತ್ತು ಗುತ್ತಿಗೆದಾರರು ಸೆರಿಕೊಂಡು ತಾಲೂಕು ಪಂಚಾಯತ್ ಅನುದಾನ‌ ₹1.76 ಕೋಟಿಯನ್ನು ದುರ್ಬಳಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

Advertisements

“ಹೀಗೆ ಅವ್ಯವಹಾರ ಮಾಡಿರುವಂತಹ ಕಾಮಗಾರಿಗಳನ್ನು ಕುರಿತು ತನಿಖೆ ಮಾಡಿ ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕೂಡಲೇ ಸೇವೆಯಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದರು.

“2023-24ನೇ ಸಾಲಿನ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಲವಾರು ಅನುದಾನಗಳನ್ನು ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಮತ್ತು ರಿಪೇರಿಗೆ ಸುಮಾರು ₹81,55,444‌ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಸುಮಾರು ₹22,87,666 ಹಾಗೂ ಗ್ರಂಥಾಲಯ ಅಭಿವೃದ್ಧಿಗೆ ₹24,87,666 ಮತ್ತು ಕೂಸಿನ ಮನೆ ಶಿಶುಪಾಲನಾ ಅಭಿವೃದ್ಧಿಗೆ ₹16,50,000 ಸೇರಿದಂತೆ ಇತರೆ ವಲಯ ಅಭಿವೃದ್ಧಿ, ಅಂಗವಿಕಲ ಕಲ್ಯಾಣಕ್ಕಾಗಿ ಹಣವನ್ನು ಮಿಸಲಿಟ್ಟು ಗ್ರಾಮಗಳ ಅಭಿವೃದ್ಧಿಗೆ ಕೊಟ್ಯಾಂತರ ರೂಪಾಯಿ ವೆಚ್ಚ ಮಾಡಬೇಕಾಗಿತ್ತು.

“ಅಭಿವೃದ್ಧಿಗೆ ಖರ್ಚು ಮಾಡಬೇಕಾದ ತಾಲೂಕು ಪಂಚಾಯತ್ ಅನುದಾನ ಯೋಜನೆ 2023-24ನೇ ಸಾಲಿನ ಅ‌ನಿರ್ಬಂಧಿತ ಅಭಿವೃದ್ಧಿ ಅನುದಾನದ ಕ್ರೀಯಾ ಯೋಜನೆಯಲ್ಲಿ ಒಟ್ಟು ತಾಲೂಕಿನ ವ್ಯಾಪ್ತಿಗೆ ಬರುವ 111 ಕಾಮಾಗಾರಿಗಳಲ್ಲಿ ಯಾವುದೇ ಕಾಮಾಗಾರಿಯೂ ಸಂಪೂರ್ಣವಾಗಿಲ್ಲ. ಅಂದಾಜು ಪತ್ರಿಕೆ ಪ್ರಕಾರ ಕಾಮಗಾರಿ ಮಾಡದೆ ಕಳಪೆ ಮಟ್ಟದಿಂದ ಹಾಗೂ ಕಾಮಗಾರಿ ಅರ್ಧಂಬರ್ಧವಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ| ಅಕ್ರಮವಾಗಿ ಮದ್ಯ ಮಾರಾಟ; ಕ್ರಮಕ್ಕೆ ಬಿಎಸ್‌ಪಿ ಅಗ್ರಹ

“ಈ ಅವ್ಯವಹಾರ ಮಾಡಿರುವ ಹಣವನ್ನು ಸರ್ಕಾರಕ್ಕೆ ಮರಳಿ ಕಟ್ಟಿಸಬೇಕು. ಒಂದು ವೇಳೆ ಈ ಅವ್ಯವಹಾರವನ್ನು ತನಿಖೆ ಮಾಡುವಲ್ಲಿ ವಿಳಂಬ ಮಾಡಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ರಾಘವೇಂದ್ರ ಎಸ್‌ ಹೂವಿನಭಾವಿ, ಬಸವರಾಜ ಸೈದಕನೊರ್, ಸುನೀಲ ತ್ರಿಪಾಠಿ, ದೆವೀಂದ್ರಪ್ಪ ಕಟ್ಟಿಮನಿ, ಖತಲಪ್ಪ ಬಸಪ್ಪನೊರ್, ರಮೇಶ ಕುಡ್ಡಳ್ಳಿ, ವೀರಶೇಟ್ಟಿ ಎಚ್ ಡಿ, ಮಾರುತಿ ತೇಗಲತಿಪ್ಪಿ, ರಾಜಕುಮಾರ ದೋಟಿಕೋಳ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X