ಕಲಬುರಗಿ | ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 35 ವರ್ಷ ಜೈಲು ಶಿಕ್ಷೆ

Date:

Advertisements

ಬಾಲಕಿಗೆ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರಗಿ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ.

ಮಹಾರಾಷ್ಟ್ರದ ಠಾಣಾ ಜಿಲ್ಲೆಯ ಭಿವಂಡಿಯ ಶಾಂತಿನಗರ ನಿವಾಸಿ ಬಟ್ಟೆ ವ್ಯಾಪಾರಿ ಮಹ್ಮದ್ ಗೌಸ್ ಮಹಿಮೂದ್ ಶೇಖ್‌ ಎಂಬಾತನಿಗೆ ಗೆ 35 ವರ್ಷ ಜೈಲು ಹಾಗೂ ₹20 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಆದೇಶ ನೀಡಿದ್ದಾರೆ. ನೊಂದ ಬಾಲಕಿಗೆ ₹5 ಲಕ್ಷ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರವಾಗಿ ಒಂದು ತಿಂಗಳು ಒಳಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದಿಸಿದ್ದಾರೆ.

ಕಲಬುರಗಿ ನಗರದ ಬಡಾವಣೆಯೊಂದರ ನಿವಾಸಿಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಬಟ್ಟೆ ವ್ಯಾಪಾರಿ ಮಹ್ಮದ್ ಗೌಸ್ ಆಗಾಗ ಭೇಟಿ ಮಾಡುತ್ತಿದ್ದ. ನನ್ನೊಂದಿಗೆ ಬಂದರೆ ನನ್ನ ಹೆಂಡತಿಗೆ ವಿಚ್ಛೇಧನ ನೀಡುತ್ತೇನೆ ಎಂದು ನಂಬಿಸಿ ಮೂರ್ನಾಲ್ಕು ಬಾರಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮುಂದೆ 2023ರ ಅ.16ರಂದು ದೂರವಾಣಿ ಮುಖಾಂತರ ತಮ್ಮೂರಿಗೆ ಬರುವಂತೆ ಹೇಳಿದ್ದಾನೆ. ನಂತರ ಬಾಲಕಿಯನ್ನು ಮನೆಯಲ್ಲಿಟ್ಟು ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕುರಿತು ದೂರು ದಾಖಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಮೋದಿ ಪಾಲಿಗೆ ಬಿಸಿ ತುಪ್ಪವಾದ ಅದಾನಿ

ಈ ಕುರಿತು ವಿಚಾರಣೆ ನಡೆಸಿದ ಇನ್ಸ್‍ಪೆಕ್ಟರ್ ಕುಬೇರ್ ರಾಯಮಾನೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X