ಚಿತ್ರದುರ್ಗ | ನ.25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ

Date:

Advertisements

ರಾಜಕೀಯ ಜಾಗೃತಿಗಾಗಿ ಬೆಂಗಳೂರಿನಲ್ಲಿ ನವೆಂಬರ್ 25ರಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶ ನಡೆಯಲಿದೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿ ಕೆ ರಾಮಚಂದ್ರ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು “ನವೆಂಬರ್ 25ರ ಸೋಮವಾರ ಬೆಳಿಗ್ಗೆ 11:30ಕ್ಕೆ ಬೆಂಗಳೂರಿನ ವಸಂತ ನಗರದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ರಾಜಕೀಯ ಜಾಗೃತಿಯನ್ನು ಮೂಡಿಸಲು ಮತ್ತು ರಾಜಕೀಯದ ಅಧಿಕಾರವನ್ನು ಪಡೆಯುವುದರ ಮೂಲಕ ಸಾಮಾಜಿಕ ಸಮಾನತೆಯನ್ನು ಸಾಧಿಸಲು ಜಾಗೃತಿಗೊಳಿಸುವ ಸಲುವಾಗಿ ಐಕ್ಯತಾ ಸಮಾವೇಶ 2024ನ್ನು ಆಯೋಜಿಸಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಮಂದಿ ಆಗಮಿಸಲಿದ್ದಾರೆ” ಎಂದು ತಿಳಿಸಿದರು.

“1932 ಸೆಪ್ಟೆಂಬರ್ 24ರ ಪೂನಾ ಒಪ್ಪಂದ ಈ ದೇಶದ ಮೂಲನಿವಾಸಿ ಜನಗಳ ರಾಜಕೀಯ ಅಧಿಕಾರವನ್ನು ಕಸಿದುಕೊಂಡಿತ್ತು. ಅಂದಿನಿಂದಲೂ ರಾಜಕೀಯ, ಸಾಮಾಜಿಕ ಸಮಾನತೆಯನ್ನು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳನ್ನು ಜಾಗೃತಿ ಪಡಿಸುವುದು ಅನಿವಾರ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.

Advertisements

ಹಿರಿಯೂರು ತಾಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಆರ್ ಮಾತನಾಡಿ “75 ವರ್ಷ ಕಳೆದರೂ ಈ ದೇಶದ ಮೂಲ ನಿವಾಸಿಗಳನ್ನು ಬೇರೆ ಬೇರೆ ಆಯಾಮಗಳಲ್ಲಿ ಗುಲಾಮರಂತೆ ನಡೆಸಿಕೊಳ್ಳುತ್ತಿರುವುದು ದುರಂತ. ಡಾ. ಅಂಬೇಡ್ಕರ್ ಅವರು ಹೇಳಿದಂತೆ ದಾಸ್ಯದ ಬದುಕಿನಲ್ಲಿ ಜೀವಿಸುವುದಕ್ಕಿಂತ ಸಾಯುವುದೇ ಮೇಲು ಎಂಬಂತೆ ನಾವು ಸ್ವಾಭಿಮಾನ, ಸಮಾನತೆ ಮತ್ತು ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಡಬೇಕಾಗಿದೆ. ಸಂವಿಧಾನದ ಅನುಚ್ಛೇದ 38, 39ಎ ಅಡಿಯಲ್ಲಿ ಜಾತಿ, ಧರ್ಮ, ವರ್ಗ, ಭಾಷೆ ಎಲ್ಲ ಕಾರಣದಿಂದ ಅವಕಾಶಗಳ ಸಮಾನತೆ ಪ್ರತಿಪಾದಿಸಿದರೂ ಕೂಡ, ರಾಜಕೀಯ ಪಕ್ಷಗಳು ಸಮಾನತೆ ಕಲ್ಪಿಸದೆ ಬೊಗಳೆ ಬಿಡುತ್ತಿವೆ. ಹಾಗಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಜಾಗೃತಿ ಮಾಡಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕ ಅಪಘಾತದಲ್ಲಿ ಸಾವು; ಮೇಲಧಿಕಾರಿಗಳ ನಿರ್ಲಕ್ಷ್ಯದ ಆರೋಪ

“ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ ಜನರು ಆಗಮಿಸಲಿದ್ದು, ಚಿತ್ರದುರ್ಗದಿಂದ ಬಹಳಷ್ಟು ಸಂಖ್ಯೆಯ ಜನರು ಆಗಮಿಸಲಿದ್ದಾರೆ” ಎಂದು ತಿಳಿಸಿದರು.‌

ಈ ವೇಳೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲಾ ಕಾರ್ಯಧ್ಯಕ್ಷ ತಿಪ್ಪೇಸ್ವಾಮಿ, ವಿನೋದ್ ಕುಮಾರ್, ಎಸ್ ಟಿ ಘಟಕದ ಅಧ್ಯಕ್ಷರಂಗಸ್ವಾಮಿ, ಲಕ್ಷ್ಮಣ್ ರಾವ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X