ಮಹಾರಾಷ್ಟ್ರ | ಇದು ಜನರ ತೀರ್ಪಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ: ಸಂಜಯ್ ರಾವತ್

Date:

Advertisements

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಹಿನ್ನೆಡೆ ಕಾಣುತ್ತಿದ್ದಂತೆ ಶಿವಸೇನೆ (ಉದ್ದವ್ ಠಾಕ್ರೆ) ಬಣ ನಾಯಕ ಸಂಜಯ್ ರಾವತ್, “ಏನೋ ನಡೆದಿದೆ, ಇದು ಜನರ ತೀರ್ಪಾಗಿರಲು ಸಾಧ್ಯವಿಲ್ಲ, ಮತಪತ್ರ ಬಳಸಿ ಮತ್ತೆ ಚುನಾವಣೆ ನಡೆಯಲಿ” ಎಂದು ಅಭಿಪ್ರಾಯಿಸಿದ್ದಾರೆ.

ಆದರೆ ಸಂಜಯ್ ರಾವತ್ ಅವರಿಗೆ ತಿರುಗೇಟು ನೀಡಿರುವ ಬಿಜೆಪಿ, “ರಾಜ್ಯಸಭಾ ಸಂಸದ ಮಾನಸಿಕ ದಿವಾಳಿತನದಿಂದ ಬಳಲುತ್ತಿದ್ದಾರೆ” ಎಂದು ಹೇಳಿದೆ.

“ಏನೋ ಗೊಂದಲವಿದೆ, ಇದು ಜನರ ತೀರ್ಪು ಆಗಿರಲು ಸಾಧ್ಯವೇ ಇಲ್ಲ” ಎಂದು ಹೇಳಿರುವ ಸಂಜಯ್ ರಾವತ್, ಮತಯಂತ್ರದಲ್ಲಿ ಸಮಸ್ಯೆ ಇದೆ ಎಂದು ನೀವು ಹೇಳುವುದೇ ಅಥವಾ ಬೇರೆ ರೀತಿಯಲ್ಲಿ ಮತಗಳನ್ನು ತಿರುಚಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Advertisements

ಇದನ್ನು ಓದಿದ್ದೀರಾ? ಚುನಾವಣಾ ಫಲಿತಾಂಶ | ಮಹಾರಾಷ್ಟ್ರದಲ್ಲಿ ‘ಮಹಾಯುತಿ’, ಜಾರ್ಖಂಡ್‌ನಲ್ಲಿ ‘ಇಂಡಿಯಾ’ ಮುನ್ನಡೆ

“ಎಲ್ಲಾ ಕ್ಷೇತ್ರದಲ್ಲಿಯೂ ಹಣದ ಮೆಷಿನ್ ಅಳವಡಿಸಲಾಗಿದೆ. ಓರ್ವ ಶಾದಕ ಸೋತರೂ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿದ್ದರು. ಯಾವುದೇ ಚುನಾವಣೆಯಲ್ಲಿ ಈ ರೀತಿ ನಡೆದಿದೆಯೇ? ಯಾವ ಧೈರ್ಯದಲ್ಲಿ ಶಿಂದೆ ಹೇಳಿಕೆ ನೀಡಿದರು? ಇದು ಯಾವ ರೀತಿಯ ಪ್ರಜಾಪ್ರಭುತ್ವ” ಎಂದು ಪ್ರಶ್ನಿಸಿದರು.

“ಯಾರಿಗಾದರೂ 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಲಭಿಸಲು ಸಾಧ್ಯವೇ? ರಾಜ್ಯದಲ್ಲಿ ಪ್ರಾಮಾಣಿಕತೆ ಇಲ್ಲದಂತೆ ತೋರುತ್ತದೆ. ಆದರೆ ಈ ರಾಜ್ಯದ ಜನರು ಅಪ್ರಾಮಾಣಿಕರಲ್ಲ” ಎಂದು ಹೇಳಿದರು.

ಈ ಫಲಿತಾಂಶವನ್ನು ನಿಮ್ಮ ಪಕ್ಷ ಸ್ವೀಕರಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾವತ್, “ಇಲ್ಲ, ಜನರು ಕೂಡಾ ಈ ಫಲಿತಾಂಶವನ್ನು ಒಪ್ಪಲಾರರು ಎಂದು ನಾನು ಭಾವಿಸುತ್ತೇನೆ. ನಾನು ಮತ್ತೆ ಹೇಳುತ್ತೇನೆ, ಇದು ಜನರ ತೀರ್ಪಲ್ಲ. ಏಕನಾಥ್ ಶಿಂದೆ ಬಣ 60 ಸ್ಥಾನಗಳನ್ನು, ಅಜಿತ್ ಪವಾರ್ ಬಣ 40 ಸ್ಥಾನಗಳನ್ನು, ಬಿಜೆಪಿ 125 ಸ್ಥಾನಗಳನ್ನು ಪಡೆಯಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಎಂದ ಚುನಾವಣೋತ್ತರ ಸಮೀಕ್ಷೆಗಳು

ಇನ್ನು ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸಂಜಯ್ ರಾವತ್, ಮತ್ತೆ ಈ ಆರೋಪವನ್ನೇ ಮಾಡಿದ್ದಾರೆ. ಜೊತೆಗೆ “ಮತ್ತೊಮ್ಮೆ ಮತಪತ್ರ ಬಳಸಿ ಚುನಾವಣೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ 145 ಬಹುಮತವಾಗಿದೆ. ಈಗಾಗಲೇ ಮಹಾಯುತಿ ಮೈತ್ರಿಕೂಟವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮತ್ತೆ ಸರ್ಕಾರ ಅಧಿಕಾರ ಪಡೆಯಲು ತಯಾರಿ ನಡೆಸುತ್ತಿದೆ. ಇಂಡಿಯಾ ಒಕ್ಕೂಟ ಭಾರಿ ಹಿನ್ನೆಡೆ ಅನುಭವಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X