ಚಂಡೀಗಢಕ್ಕೆ ಟ್ರಕ್‌ನಲ್ಲಿ ರಾಹುಲ್‌ ಗಾಂಧಿ ಪ್ರಯಾಣ | ಚಾಲಕರೊಡನೆ ಮಾತುಕತೆ

Date:

Advertisements

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯಿಂದ ಚಂಡೀಗಢಕ್ಕೆ ಸೋಮವಾರ (ಮೇ 22) ರಾತ್ರಿ ಟ್ರಕ್‌ನಲ್ಲಿ ಸಂಚರಿಸಿ ಚಾಲಕರ ಮನವಿಯನ್ನು ಆಲಿಸಿದ್ದಾರೆ.

ಟ್ರಕ್‌ನಲ್ಲಿ ಸಂಚರಿಸುತ್ತ ಚಾಲಕರ ಜತೆ ಮಾತನಾಡಿ ಅವರ ಕಷ್ಟ ಸುಖಗಳಿಗೆ ಕಿವಿಯಾಗಿದ್ದಾರೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

Advertisements

ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿದೆ. “ಟ್ರಕ್‌ ಚಾಲಕರೊಂದಿಗೆ ಜನ ನಾಯಕರಾಗಿರುವ ರಾಹುಲ್‌ ಗಾಂಧಿ ತೆರಳಿ ಅವರ ಕಷ್ಟಗಳನ್ನು ಆಲಿಸುತ್ತ ದೆಹಲಿಯಿಂದ ಚಂಡೀಗಢವರೆಗೆ ಪ್ರಯಾಣಿಸಿದರು. ಮಾಧ್ಯಮಗಳ ವರದಿ ಪ್ರಕಾರ ಭಾರತದಲ್ಲಿ ಸುಮಾರು 90 ಲಕ್ಷ ಟ್ರಕ್‌ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಂಕಷ್ಟಗಳಿವೆ. ಅವರ ಮನದ ಮಾತನ್ನು ರಾಹುಲ್‌ ಅವರು ಆಲಿಸಿದ್ದಾರೆ” ಎಂದು ಬರೆದುಕೊಂಡಿದೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸಿರುವ ವಿಡಿಯೋವನ್ನು ಸಹ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ರಾಹುಲ್‌ ಅವರು ಟ್ರಕ್‌ ಚಾಲಕರೊಂದಿಗೆ ಮಾತನಾಡುವ ದೃಶ್ಯಗಳು ವಿಡಿಯೋದಲ್ಲಿವೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

ರಾಹುಲ್‌ ಅವರು ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಬ್ಲಿಂಕಿಟ್ ಡೆಲಿವರಿ ಎಕ್ಸಿಕ್ಯೂಟಿವ್ ಜೊತೆ ಸವಾರಿ ಮಾಡಿದ್ದರು.

ಈ ವೇಳೆ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮಾತುಕತೆ ನಡೆಸಿದ್ದರು. ಸಾಮಾನ್ಯರಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ, ಎಲ್ಲರೊಂದಿಗೆ ಬೆರೆತು ಮಾತುಕತೆಯಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X