10 ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲ, ತಪ್ಪಾಗುವುದು ಸಹಜ: ಸುಪ್ರೀಂ ಕೋರ್ಟ್

Date:

Advertisements

ಹತ್ತು ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲದಿದ್ದರೂ ಅವರ ಕೆಲಸದ ಹೊರೆ ಮಾತ್ರ ಏರುತ್ತಲೇ ಇದೆ ಎಂದು ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ.

ನ್ಯಾಯಾಧೀಶರು ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದನ್ನು ಕಂಡಾಗ ಅವರಿಂದ ತಪ್ಪುಗಳಾಗುತ್ತವೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ತಿಳಿಸಿತು.

“ನ್ಯಾಯಾಧೀಶರು ಮನುಷ್ಯರು. ಎಲ್ಲ ಮನುಷ್ಯರು ತಪ್ಪು ಮಾಡುತ್ತಾರೆ. ತಪ್ಪು ಮಾಡುವುದು ಮನುಷ್ಯರ ಸಹಜ ಗುಣ. ನಮ್ಮ ದೇಶದ ಬಹುತೇಕ ಎಲ್ಲ ನ್ಯಾಯಾಲಯಗಳು ಕೆಲಸದ ಹೊರೆ ಹೊತ್ತಿವೆ. 2002ರಲ್ಲಿ, “ಅಖಿಲ ಭಾರತ ನ್ಯಾಯಾಧೀಶರ ಸಂಘ ಇನ್ನಿತರರು ಮತ್ತು ಭಾರತ ಒಕ್ಕೂಟ ಮತ್ತಿತರರ ನಡುವಣ ಪ್ರಕರಣದಲ್ಲಿ ಐದು ವರ್ಷದೊಳಗೆ ಹತ್ತು ಲಕ್ಷ ಜನಸಂಖ್ಯೆಗೆ ನ್ಯಾಯಾಧೀಶರ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸಬೇಕು ಎಂದಿತ್ತು. ಆದರೆ ಜನಸಂಖ್ಯೆ ಮತ್ತು ದಾವೆ ಸಂಖ್ಯೆ ಗಣನೀಯವಾಗಿ ಹೆಚ್ಚಿತು” ಎಂದು ಅದು ನುಡಿಯಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ನ್ಯಾಯಾಧೀಶರು ಅವರು ಯಾವುದೇ ಜವಾಬ್ದಾರಿ ನಿರ್ವಹಿಸುತ್ತಿದ್ದರೂ ಕೆಲಸದ ಒತ್ತಡದಂತಹ ಕಾರಣಗಳಿಂದಾಗಿ ದೋಷ ಎಸಗುವ ಸಾದ್ಯತೆ ಇದೆ. ಹೀಗಾಗಿ ತಪ್ಪೆಸಗುವ ನ್ಯಾಯಾಧೀಶರ ವಿರುದ್ಧ ಪ್ರತಿಕೂಲ ಹೇಳಿಕೆ ನೀಡುವಾಗ ಉನ್ನತ ನ್ಯಾಯಾಲಯಗಳು ಸಂಯಮ ತೋರಬೇಕು ವೈಯಕ್ತಿಕ ಟೀಕೆ ಮಾಡುವುದನ್ನು ಅಥವಾ ತೀರ್ಪುಗಳಲ್ಲಿ ನ್ಯಾಯಾಧೀಶರ ನಡೆ ದಾಖಲಿಸುವುದುನ್ನು ತಪ್ಪಿಸಬೇಕು ಎಂದು ಕೋರ್ಟ್ ಹೇಳಿದೆ.

ತನ್ನ ನ್ಯಾಯಾಂಗ ಆದೇಶದಲ್ಲಿ ದೆಹಲಿ ಪೊಲೀಸರ ನಡೆಯನ್ನು ನ್ಯಾಯಾಧೀಶರೊಬ್ಬರು ಖಂಡಿಸಿದ್ದರು. ಹೀಗಾಗಿ ದೆಹಲಿ ಹೈಕೋರ್ಟ್‌ ಅವರ ವಿರುದ್ಧ ಪ್ರತಿಕೂಲ ಟೀಕೆ ಮಾಡಿತ್ತು. ಈ ಟೀಕೆಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಕೋರಿ ನ್ಯಾಯಾಧೀಶ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಮನವಿಯನ್ನು ಪುರಸ್ಕರಿಸಿ ಶುಕ್ರವಾರ ನೀಡಿದ್ದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರತಿಕೂಲ ಹೇಳಿಕೆಗಳು ನ್ಯಾಯಾಧೀಶರ ವೃತ್ತಿಗೆ ಮಾರಕವಾಗಲಿದ್ದು ಸಾಂವಿಧಾನಿಕ ನ್ಯಾಯಾಲಯಗಳು ಕೂಡ ತಪ್ಪೆಸಗುವ ಸಾಧ್ಯತೆ ಇದೆ ಎಂದು ಪೀಠ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X