ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 27ಕ್ಕೆ ಮುಂದೂಡಿಕೆ

Date:

Advertisements

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಆರಂಭವಾಗಿದ್ದು ಸ್ಪೀಕರ್ ಓಂ ಬಿರ್ಲಾ ಅವರು ಅಧಿವೇಶನವನ್ನು ನವೆಂಬರ್ 27ಕ್ಕೆ ಮುಂದೂಡಿದ್ದಾರೆ. ಅದಾನಿ ಹಗರಣ, ಮಣಿಪುರ ಹಿಂಸಾಚಾರ ಬಗ್ಗೆ ಸದನದಲ್ಲಿ ವಿಪಕ್ಷಗಳು ಪ್ರಸ್ತಾಪಿಸಿದ್ದು ಗದ್ದಲದ ಬಳಿಕ ಕಲಾಪ ಮುಂದೂಡಲಾಗಿದೆ.

ಇನ್ನು “ಸ್ಪೀಕರ್ ಸದನವನ್ನು ಯಾಕೆ ಮುಂದೂಡಿದರು ಎಂಬುದು ತಿಳಿದಿಲ್ಲ” ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಹೇಳಿದ್ದಾರೆ. 

“ಮಣಿಪುರ ಹಿಂಸಾಚಾರದ ವಿಷಯವನ್ನು ಪ್ರಸ್ತಾಪಿಸಲು ನಾವು ಆಗ್ರಹಿಸಿದ್ದೇವೆ. ಮಣಿಪುರದಲ್ಲಿ ಅತ್ಯಾಚಾರ, ಕೊಲೆಗಳು ನಡೆಯುತ್ತಿವೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು ಉತ್ತರ ಭಾರತದಲ್ಲಿ ಮಾಲಿನ್ಯ ಅಧಿಕವಾಗಿದೆ. ಈ ಬಗ್ಗೆ ನಮಗೆ ಆತಂಕವಿದೆ. ಇದು ಅತೀ ಗಂಭೀರ ವಿಷಯಗಳಾಗಿವೆ” ಎಂದು ಕಾಂಗ್ರೆಸ್‌ನ ಪ್ರಮೋದ್ ತಿವಾರಿ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಡಿ. 9ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನ ಉಭಯ ಸದನಗಳು ಸುಗಮವಾಗಿ ನಡೆಯಲು ಸಹಕಾರ ಮತ್ತು ಬೆಂಬಲ ನೀಡುವಂತೆ ಎಲ್ಲಾ ಪಕ್ಷದ ನಾಯಕರನ್ನು ವಿನಂತಿಸಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಚಳಿಗಾಲದ ಅಧಿವೇಶನವು ಡಿಸೆಂಬರ್ 20ರವರೆಗೆ ನಡೆಯಲಿದೆ. ಈ ಅಧಿವೇಶನದಲ್ಲಿ, ವಕ್ಫ್ ತಿದ್ದುಪಡಿ ಮಸೂದೆ ಮತ್ತು ವಿಪತ್ತು ನಿರ್ವಹಣಾ (ತಿದ್ದುಪಡಿ) ಮಸೂದೆಗಳು ಚರ್ಚೆಗೆ ಬರುವ ಸಾಧ್ಯತೆಯಿದೆ. ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ ಮತ್ತು ರೈಲ್ವೆ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ. ರೈಲ್ವೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನೂ ಮಂಡಿಸಲಾಗುವುದು.

ಜೊತೆಗೆ ಈ ಅಧಿವೇಶನದಲ್ಲಿ ಸರ್ಕಾರವು ‘ಒಂದು ದೇಶ ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಬಹುದು ಎಂಬ ಊಹಾಪೋಹಗಳಿವೆ. ಇತ್ತೀಚೆಗೆ ಒಂದು ದೇಶ ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X