ಹಾವೇರಿ | ನಾಡು-ನುಡಿ ಸಂಸ್ಕೃತಿ ಉಳಿವಿಗೆ ಕನ್ನಡಪರ ಸಂಘಟನೆಗಳು ಅವಶ್ಯ: ಯಲ್ಲಪ್ಪ ಮರಾಠೆ

Date:

Advertisements

ಕನ್ನಡ ನಾಡು-ನುಡಿ, ನೆಲ, ಬಾಷಾ ಸಂಸ್ಕೃತಿ ಉಳಿಯಬೇಕಾದರೆ ಈ ನಾಡಿಗೆ ಕನ್ನಡಪರ ಸಂಘಟನೆಗಳ ಅವಶ್ಯವಿದೆ ಎಂದು ಹಾವೇರಿ ಜಿಲ್ಲೆ ಶಿಗ್ಗಾವಿಯ ತಡಸ ಗ್ರಾಮದಲ್ಲಿ ನಡೆದ ‘ಕನ್ನಡ ಹಬ್ಬ’ ಕಾರ್ಯಕ್ರಮದಲ್ಲಿ ಕರವೇ ಗಜಪಡೆ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಸಂಘಟನೆಯ ವತಿಯಿಂದ ಅಯೋಜಿಸಿದ “ಕನ್ನಡ ಹಬ್ಬ” ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋವಾ, ಮಹಾರಾಷ್ಟ್ರ , ಆಂದ್ರ, ಕೇರಳ, ತಮಿಳುನಾಡು ರಾಜ್ಯವನ್ನು ಕಬಳಿಸುವ ಹುನ್ನಾರ ನಡೆದಾಗ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದೇ ಇದ್ದಿದ್ದರೆ; ಇಡೀ ಕರ್ನಾಟಕ ರಾಜ್ಯವೇ ಹರಿದು ಹಂಚಿ ಹೋಗುತ್ತಿತ್ತು. ಈ ಬಗ್ಗೆ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕನ್ನಡಪರ ಸಂಘಟನೆಗಳಿಂದ ‘ಕನ್ನಡ ಹಬ್ಬ’ ಎಂಬ ಮಹೋನ್ನತ ಆಚರಣೆಯನ್ನು ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಇಲಾಖೆಯ ಅಂಬುಲೆನ್ಸ್ ಚಾಲಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಿದರು.

Advertisements

ಇದನ್ನು ಓದಿದ್ದೀರಾ? ಬೆಳಗಾವಿ | ಕಾರು ಅಪಘಾತದಲ್ಲಿ ದಂಪತಿ ಸಾವು: 5 ಜನರಿಗೆ ಗಾಯ

ಕಾರ್ಯಕ್ರಮದಲ್ಲಿ ತಡಸ ಗ್ರಾಮ ಪಂಚಾಯತ್ ಅಧ್ಯಕ್ಷರು, ಕರವೇ ಗಜಪಡೆ ಜಿಲ್ಲಾ ಪದಾಧಿಕಾರಿಗಳು, ತಾಲೂಕಾಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸಂಘಟನೆಯ ಕಾರ್ಯಕರ್ತರು, ಶಾಲಾ ಕಾಲೇಜು ವಿಧ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X