ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರು ಸಾವು

Date:

Advertisements

ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೊಬ್ಬರ ಗುರುತು  ಪತ್ತೆಯಾಗಿಲ್ಲ.

ವಿವೇಕ್ ಹಾಗೂ ಅಮಿತ್ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಲು ಶನಿವಾರ ಬಾಡಿಗೆ ಕಾರೊಂದನ್ನು ಗೊತ್ತುಪಡಿಸಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು. ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾನೆ. ಆದರೆ ಸೇತುವೆ ಅಪೂರ್ಣಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ ಅಷ್ಟೋತ್ತಿಗಾಗಲೇ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

Advertisements

ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ ಬಳಿಕ ಕಾರಿನ ಬಳಿ ತೆರಳಿದ್ದಾರೆ ಈ ವೇಳೆ ಕಾರಿನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ನಡುವೆ ಅಮಿತ್ ಹಾಗೂ ವಿವೇಕ್ ಕುಟುಂಬ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿ ಸೇತುವೆ ನಿರ್ಮಾಣ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಗೆ ಬ್ಯಾರಿಕೇಡ್ ಇಡದೆ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಇಂತಹ ದುರಂತಗಳಿಗೆ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕ. ಬಾರತದಲ್ಲಿ ನಡೆಯುವ ಕಾಮಗಾರಿಗಳಿಗೆ ಯಾವುದೇ ಸುರಕ್ಷಾ ಮಾನದಂಡ ಬಳಸದಿರುವುದು ದುರಂತ. ಇದರಲ್ಲಿ ಸರಕಾರಕ್ಕೂ ಪಾಲಿದೆ. ಕಾಮಗಾರಿಗಳಿಗೆ ಕಾಲಮಿತಿಯನ್ನೂ ನಿಗದಿಪಡಿಸುವುದಿಲ್ಲ. ಈ ದಿನ.ಕಾಮ್ ಈ ಕುರಿತಂತೆ ಸರಕಾರದ ಗಮನ ಸೆಳೆಯಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X