ಚಿತ್ರದುರ್ಗ | ಅಕ್ರಮ ಮದ್ಯ ಸಾಗಾಟ: ವ್ಯಕ್ತಿ ಮತ್ತು ದ್ವಿಚಕ್ರ ವಾಹನ ಅಧಿಕಾರಿಗಳ ವಶಕ್ಕೆ

Date:

Advertisements

ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸಾಗಾಟಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಅಬಕಾರಿ ಅಧಿಕಾರಿಗಳು‌ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ನಡೆದಿದೆ.

ಚಳ್ಳಕೆರೆ ನಗರದ ಅಬಕಾರಿ ಉಪ ನಿರೀಕ್ಷಕರು ಹಾಗೂ ನಿರೀಕ್ಷಕರು ಚಳ್ಳಕೆರೆ ವಲಯ ಅಬಕಾರಿ ಸಿಬ್ಬಂದಿಯೊಂದಿಗೆ ಬಳ್ಳಾರಿ ಮುಖ್ಯ ರಸ್ತೆಯ ನಾಯಕನಹಟ್ಟಿ ಕ್ರಾಸ್ ಬಳಿ ಸರ್ವೀಸ್‌ ರಸ್ತೆಯಲ್ಲಿನ ಬಸ್‌ ನಿಲ್ದಾಣದ ಮುಂಭಾಗ ವಾಹನ ತಪಾಸಣೆ ಮಾಡುತ್ತಿದ್ದಾಗ ವ್ಯಕ್ತಿಯೋರ್ವನು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು, ತಕ್ಷಣ ವ್ಯಕ್ತಿ ಹಾಗೂ ದ್ವಿಚಕ್ರವಾಹನ ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ದೇವರಹಟ್ಟಿ ಚಿಕ್ಕಮ್ಮನಹಳ್ಳಿ ಗ್ರಾಮದ ಚೆನ್ನಯ್ಯ (60) ಎಂದು ತಿಳಿದು ಬಂದಿದೆ. ಅಲ್ಲದೆ ಟಿ.ವಿ.ಎಸ್‌ ಎಕ್ಸ್‌.ಎಲ್. ದ್ವಿಚಕ್ರ ವಾಹನದಲ್ಲಿ ಹೈವಾರ್ಡ್ಸ್ ವಿಸ್ಕಿ-90 ಮಿಲಿಯ 40 ಟೆಟ್ರಾ ಪ್ಯಾಕ್ ಗಳು ಒಟ್ಟು- 3.600 ಲೀಟರ್ ಮದ್ಯ ಕಂಡುಬಂದಿದ್ದು, ಮದ್ಯ ಹಾಗೂ ದ್ವಿಚಕ್ರ ವಾಹನವೂ ಸೇರಿದಂತೆ 40 ಸಾವಿರ ಮೌಲ್ಯದ ಸರಕನ್ನು ವಶಕ್ಕೆ ಪಡೆದು ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisements
https://twitter.com/eedinanews/status/1860278926804934838

ತಪಾಸಣೆ ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನಾಗರಾಜು ಸಿ, ಅಬಕಾರಿ ಮುಖ್ಯ ಪೇದೆ ಟಿ.ರಂಗಸ್ವಾಮಿ, ಎನ್.ನಾಗರಾಜ, ಟಿ.ಸೋಮಶೇಖರ್ ಅಬಕಾರಿ ಪೇದೆ ದರ್ಶನ್ ಕುಮಾರ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X