ಧಾರವಾಡ | ಶಾಲಾ ಮಕ್ಕಳಿಗೆ ಪೋಸ್ಟರ್ ರಚಿಸುವ ಸ್ಪರ್ಧೆ: 80 ವಿದ್ಯಾರ್ಥಿಗಳು ಭಾಗಿ

Date:

Advertisements

ಧಾರವಾಡದ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ ಸಂಸ್ಥೆ (ಇಂಟ್ಯಾಕ್) ವತಿಯಿಂದ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ 7, 8 ಮತ್ತು 9ನೇ ತರಗತಿ ಶಾಲಾ ಮಕ್ಕಳಿಗೆ ಪೋಸ್ಟರ್ ರಚಿಸುವ ಸ್ಪರ್ಧೆಯನ್ನು ಆಯೋಜಿಸಿದ್ದರು.

ಸ್ಪರ್ದೆಯಲ್ಲಿ ಹುಬ್ಬಳ್ಳಿ-ಧಾರವಾಡದ ವಿವಿಧ ಶಾಲೆಗಳ ಸುಮಾರು 80 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಕುರಿತು ಭಾರತದ ನೈಸರ್ಗಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಮೀಸಲಾದ ದೇಶದ ಅತಿ ದೊಡ್ಡ ಸಂಸ್ಥೆ ಇಂಟ್ಯಾಕ್ ಎಂದು ಡಾ.ಆರ್.ಜಿ.ಪುರಾಣಿಕ ಹೇಳಿದರು.

ಚಿತ್ರ ಕಲಾ ಮಹಾವಿದ್ಯಾಲಯದ ಪ್ರೊ. ಎಸ್.ಕೆ.ಪತ್ತಾರ, ಪೋಸ್ಟರ್ ತಯಾರಿಸುವ ಕುರಿತು ವಿವರಿಸಿದರು. ಇಂಟ್ಯಾಕ್ ಸಂಚಾಲಕ ಡಾ. ಮೋಹನ ಮಠ, ಸಾಂಸ್ಕೃತಿಕ ಪರಂಪರೆಯನ್ನು ಒಳಗೊಂಡ ಪ್ರಾದೇಶಿಕ ಹಬ್ಬಗಳು, ಸಂಪ್ರದಾಯ, ಪದ್ಧತಿ ಮತ್ತು ಸಾಮಾಜಿಕ ಆಚರಣೆಗಳ ಕುರಿತು ಪೋಸ್ಟರ್ ರಚಿಸಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.

Advertisements

ಈ ವರದಿ ಓದಿದ್ದೀರಾ? ಉತ್ತರ ಕನ್ನಡ | ಮಂಗನಬಾವು ಸೋಂಕು 130ಕ್ಕೆ ಏರಿಕೆ: ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದೇನು?

ಸಂಸ್ಥೆಯ ಸದಸ್ಯ ಸುರೇಶ ಹಾಲಭಾವಿ, ಶೈಲಾ ಕರಗುದರಿ, ಬಿ.ಆರ್.ಸಾರಥಿ, ಡಾ.ಶಶಿಧರ ನರೇಂದ್ರ, ರೇಖಾ ಶೆಟ್ಟರ, ಡಾ.ರಾಜಶ್ರೀ ಗುದಗನವರ, ಗಝಲ್ ಕಾಮತ್ ಉಪಸ್ಥಿತರಿದ್ದರು. ಪ್ರೊ.ಸುರೇಶ ಗುದಗನವರ ಸ್ವಾಗತಿಸಿದರು. ಡಾ.ಎನ್. ಬಿ.ನಾಲತವಾಡ ನಿರೂಪಿಸಿದರು. ಲತಾ ಶಹಾಪುರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X