ನೆಲಮಂಗಲ | ಮಹಿಳೆ ಕೊಂದಿದ್ದ ಚಿರತೆ ಕೊನೆಗೂ ಸೆರೆ

Date:

Advertisements

ಅರಣ್ಯ ಇಲಾಖೆ ಸತತ ಒಂದು ವಾರದಿಂದ ನಡೆಸಿದ ಕಾರ್ಯಚರಣೆಯಿಂದ ಕರಿಯಮ್ಮ ಅವರನ್ನು ಕೊಂದಿದ್ದ ಚಿರತೆ ಸೆರೆ ಸಿಕ್ಕಿದೆ. ಚಿರತೆ ಸೆರೆಗಾಗಿ ತುಮಕೂರು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.

ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯಲ್ಲಿ ಬೋನನ್ನು ಗಮನಿಸಿದಾಗ ಚಿರತೆ ಸೆರೆಯಾಗಿರುವುದು ಗೊತ್ತಾಗಿದೆ. ನ.18ರಂದು ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಡದ ತಪ್ಪಲಲ್ಲಿರುವ ಕಂಬಾಳು ಗೊಲ್ಲರಹಟ್ಟಿಯ ಕರಿಯಮ್ಮ ಅವರನ್ನು ಸಂಜೆ 5ರ ಸಮಯದಲ್ಲಿ ಚಿರತೆ ಕೊಂದು ಎಳೆದುಕೊಂಡು ಹೋಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

Advertisements

ಇದರಿಂದ ಗ್ರಾಮದ ಜನರು ಭಯಗೊಂಡಿದ್ದರು. ಚಿರತೆ ಹಿಡಿಯಲು ಅರಣ್ಯ ಇಲಾಖೆಯು ಒಂಬತ್ತು ಬೋನುಗಳನ್ನು ಇಟ್ಟಿತ್ತು. ನ. 24ರ ಸಂಜೆ 5 ಗಂಟೆ ವೇಳೆ ಕರಿಯಮ್ಮನನ್ನು ಕೊಂದ ಸ್ಥಳದ 100 ಮೀಟರ್ ದೂರದಲ್ಲಿ ಚಿರತೆ ಬಂಡೆ ಮೇಲೆ ಕಾಣಿಸಿಕೊಂಡಿತ್ತು. ಇದು ಜನರನ್ನು ಇನ್ನಷ್ಟು ಭಯಕ್ಕೆ ದೂಡಿತ್ತು.

ಸೆರೆ ಸಿಕ್ಕಿರುವ ಚಿರತೆಯು ಸುಮಾರು ಮೂರು ವರ್ಷದ್ದಾಗಿದೆ. ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ 40-50 ಸಿಬ್ಬಂದಿ ಒಂದು ವಾರದಿಂದ ಚಿರತೆ ಸೆರೆ ಹಿಡಿಯಲು ಕಾರ್ಯಚರಣೆ ನಡೆಸಿದ್ದರು. ಶಿವಗಂಗೆ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಇನ್ನೂ ಚಿರತೆಗಳಿವೆ ಇರುವ ಆತಂಕ ಜನರದ್ದಾಗಿದೆ. ಈಗ ಸೆರೆ ಸಿಕ್ಕಿರುವ ಚಿರತೆ ಕರಿಯಮ್ಮ ಅವರನ್ನು ಕೊಂದ ಚಿರತೆಯೇ ಅಥವಾ ಬೇರೆಯದೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X