ರಾಯಚೂರು | ಕೆಇಬಿ ಇಲಾಖೆ ಅಧಿಕಾರಿಯಿಂದ ಮಹಿಳೆಗೆ ಕಿರುಕುಳ; ಕಾನೂನು ಹೋರಾಟದ ಎಚ್ಚರಿಕೆ

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆಇಬಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬ ಒಂದೂವರೆ ವರ್ಷದ ಹಿಂದೆ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದು, ಈಗ ಮಹಿಳೆಯಿಂದ ದೂರವಾಗಿದ್ದಾನೆ. ಅಧಿಕಾರಿ ತಮ್ಮ ತಪ್ಪನ್ನು ಅರಿತು ಮಹಿಳೆಯೊಂದಿಗೆ ಜೀವನ ನಡೆಸದಿದ್ದರೆ ಕಾನೂನು ರೀತಿಯ ಹೋರಾಟ ಮಾಡಿ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಕರ್ನಾಟಕ ಧ್ವನಿ ಮಹಿಳಾ ಮಕ್ಕಳ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷೆ ರಜಿನಿರಾಜ್ ಹೇಳಿದರು.

ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ರಾಜ್ಯದಲ್ಲಿ ಮಕ್ಕಳು ಹಾಗೂ ನೊಂದ ಮಹಿಳೆಯರು ಲೈಂಗಿಕ ಕಿರುಕುಳ ಸಮಸ್ಯೆ ಎದುರಿಸುತ್ತಿದ್ದರೆ, ಅದರ ವಿರುದ್ಧ ಕಾನೂನುತ್ಮಕ ಹೋರಾಟ ಮಾಡಿ ಬಗೆಹರಿಸುವಂತ ಕೆಲಸ ಮಾಡುತ್ತೇವೆ” ಎಂದರು.

“ನಮ್ಮ ಸಂಸ್ಥೆಯಿಂದ ಈಗಾಗಲೇ 33 ಪ್ರಕರಣಗಳನ್ನು ಬಗೆಹರಿಸಿದ್ದು, ನಮ್ಮ ಸಂಸ್ಥೆಯ ಸೇವೆಯನ್ನು ಗುರುತಿಸಿ ನ್ಯಾಯಾಧೀಶರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸೆ ಪತ್ರವನ್ನು ನೀಡಿ ಸನ್ಮಾನಿಸಿದ್ದಾರೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 200 ಎಕರೆ ಕಬ್ಬು ಬೆಂಕಿಗಾಹುತಿ

“ರಾಜ್ಯದಲ್ಲಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಯಾವುದೇ ರೀತಿ ಸಮಸ್ಯೆಯಾದರೆ ನಮ್ಮ ಸಂಸ್ಥೆ ಅವರ ಪರವಾಗಿ ನಿಂತು ಸಮಸ್ಯೆಯನ್ನು ನಿವಾರಿಸುವ ಕೆಲಸ ಮಾಡುತ್ತೇವೆ. ಮಕ್ಕಳ ಮತ್ತು ನೊಂದ ಮಹಿಳೆಯರ ಸಮಸ್ಯೆಗಳಿದ್ದರೆ 9986560974ಕ್ಕೆ ಸಂಪರ್ಕಿಸಬಹುದು” ಎಂದರು.

ಈ ಸಂದರ್ಭದಲ್ಲಿ ವಕೀಲೆ ರಶ್ಮಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X