ದಾವಣಗೆರೆ | 7 ತಿಂಗಳಲ್ಲಿ 125 ಶಿಶುಗಳು, 28 ಮಂದಿ ಬಾಣಂತಿಯರು ಸಾವು

Date:

Advertisements

ದಾವಣಗೆರೆ ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅತೀ ಹೆಚ್ಚು ಮಂದಿ ಸರ್ಕಾರಿ ಆಸ್ಪತ್ರೆಯಲ್ಲೇ ಮೃತರಾಗಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬೆಳಕಿಗೆ ಬಂದಿದೆ.

2024ರ ಏಪ್ರಿಲ್ ಮತ್ತು ​ನವೆಂಬರ್ ನಡೆವೆ 125 ನವಜಾತ ಶಿಶುಗಳು ಮತ್ತು 28 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ. ಈ ಪೈಕಿ, ಚಿಗಟೇರಿ ಸರ್ಕಾರಿ ಆಸ್ಪತ್ರೆಯಲ್ಲಿ 111 ಶಿಶುಗಳು ಮೃತಪಟ್ಟಿದ್ದರೆ, ದಾವಣಗೆರೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 24 ಶಿಶುಗಳು ಸಾವನ್ನಪ್ಪಿವೆ. ಮೃತಪಟ್ಟ ಬಾಣಂತಿಯರಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ 23 ಮಂದಿ ಸಾವನ್ನಪ್ಪಿದ್ದು, ಐವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಕಳೆದ 7 ತಿಂಗಳಲ್ಲಿ ದಾವಣಗೆರೆಯ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆಗೆ 732 ಮಕ್ಕಳು ದಾಖಲಾಗಿದದ್ದರು. ಅವರಲ್ಲಿ, 657 ಶಿಶುಗಳು ಆರೋಗ್ಯವಾಗಿ ಡಿಸ್ಚಾರ್ಜ್ ಆಗಿವೆ. 34 ಶಿಶುಗಳನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಅಂತೆಯೇ, ಚಿಗಟೇರಿ ಆಸ್ಪತ್ರೆಯಲ್ಲಿ 1,103 ಶಿಶುಗಳ ದಾಖಲಾಗಿದ್ದರು. ಅವರಲ್ಲಿ, 882 ಶಿಶುಗಳು ಡಿಸ್ಚಾರ್ಜ್ ಆಗಿದ್ದರೆ, 44 ಶಿಶುಗಳನ್ನು ಬೇರೆ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಎರಡೂ ಆಸ್ಪತ್ರೆಯಲ್ಲಿ ಒಟ್ಟು 125 ಮಕ್ಕಳು ಸಾವನ್ನಪ್ಪಿದ್ದರೆ.

Advertisements

ಈ ಎರಡೂ ಆಸ್ಪತ್ರೆಗಳಲ್ಲಿ ತಾಲಾ ಒಂದೊಂದು ‘ನ್ಯೂ ಬಾರ್ನ್ ​ಕೇರ್’ ಘಟಕಗಳಿವೆ. ಆದರೆ, ಜಿಲ್ಲೆಯ ಬೇರಾವುದೇ ತಾಲೂಕು ಅಸ್ಪತ್ರೆಗಳಲ್ಲಿ ಈ ಘಟಕಗಳು ಇಲ್ಲದ ಕಾರಣ, ಶಿಶುಗಳ ಆರೋಗ್ಯ ಬಿಗಡಾಯಿಸಿದ್ದ ಕೊನೆಯ ಹಂತದಲ್ಲಿ ದಾವಣಗೆರೆ ಮತ್ತು ಚಿಗಟೇರಿ ಆಸ್ಪತ್ರೆಗಳಿಗೆ ಕಳಿಸಲಾಗುತ್ತದೆ. ಆದ್ದರಿಂದ, ಆಸ್ಪತ್ರೆಗಳಲ್ಲಿ ಮಕ್ಕಳ ಮರಣ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X