ವಿಜಯಪುರ | ತುರ್ತಾಗಿ ಒಳಮೀಸಲಾತಿ ನೀಡುವಂತೆ ದಲಿತ ಸಂಘಟನೆಗಳ ಆಗ್ರಹ

Date:

Advertisements

ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್‌ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಸಂಘಟಕರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ ಎಸ್ ನಾಡಗೌಡರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾಂದೆ, ಸಿಪಿಐ ಮಲ್ಲಿಕಾರ್ಜನ ತುಳಸಿಗೇರಿ, ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ ಸೇರಿದಂತೆ ನೂರಾರು ಪೋಲಿಸರು ಪ್ರತಿಭಟಟನಾಕಾರರನ್ನು ತಡೆದಿದ್ದು, ತಹ‌ಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೋರಿದರು.‌

Advertisements

ದಲಿತ ಚಳುವಳಿಯ ಮುಖಂಡ ಡಿ ಬಿ ಮೂದೂರ ಮಾತನಾಡಿ, “ದೇಶದಲ್ಲಿ ತೀರಾ ಹಿಂದುಳಿದ ಕೊಳಚೆ ಪ್ರದೇಶದಲ್ಲಿ ಜೀವನ ನಡೆಸುತ್ತಿರುವ ಮಾದಿಗ ಸಮುದಾಯ ಬಾಂಧವರ ಮಕ್ಕಳು ಶಿಕ್ಷಣವಂತರಾಗಿ ಮುನ್ನಲೆಗೆ ಬರಬೇಕೆಂದರೆ ದಲಿತರ ಒಳಮಿಸಲಾತಿ ಅವಶ್ಯಕವಾಗಿದೆ. ನಿಜವಾದ ಅಸ್ಪೃಶ್ಯರಾದ ದಲಿತ ಸಮುದಾಯದವರು ಕಳೆದ 45 ರಿಂದ 50 ವರ್ಷ ಒಳ ಮೀಸಲಾತಿಗೆ ಹೋರಾಟ ನಡೆಸಿದರೂ ಕೂಡಾ ಸರ್ಕಾರಗಳು ನಮ್ಮ ಮನವಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಆಯಾ ಮತಕ್ಷೇತ್ರದ ಶಾಸಕರ ಮನೆಗೆ ಮುತ್ತಿಗೆ ಹಾಕಿ ನಮ್ಮ ಹಕ್ಕಿಗಾಗಿ ಪ್ರತಿಭಟಿಸುತ್ತಿದ್ದೇವೆ” ಎಂದು ಹೇಳಿದರು.

ಹರೀಶ್ ನಾಟಿಕರ್ ಮಾತನಾಡಿ, “ನಾವು ಪ್ರತಿಭಟನೆ ಬಗ್ಗೆ 15 ದಿನಗಳ ಹಿಂದೆಯೇ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳ ಮೂಲಕ ನಮ್ಮ ಹೋರಾಟದ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದೆವು.‌ ಆದರೆ ಶಾಸಕ ನಾಡಗೌಡರು ಹೋರಾಟಗಾರರನ್ನು ಒಂದು ದಿನವೂ ಕರೆಯಲಿಲ್ಲ. ನಮ್ಮ ಹಕ್ಕಿನ ಕುರಿತು ಸ್ಪಂದನೆ ನೀಡಲಿಲ್ಲ. ನಮ್ಮ ಹಕ್ಕಿಗಾಗಿ ಮೀಸಲಾತಿ ಮಡೆದುಕೊಳ್ಳಲು ನಾವು ಸಿದ್ಧರಿದ್ದೇವೆ. ಹೋರಾಟ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ ಕಾರಣ ಶಾಸಕ ಸಿ ಎಸ್ ನಾಡಗೌಡ ಅವರು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶದಲ್ಲಿ ಒಳಮೀಸಲಾತಿ ಬಗ್ಗೆ ಧ್ವನಿ ಎತ್ತುವ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆದು ಒಳಮೀಸಲಾತಿಯ ಹಕ್ಕು ನಮಗೆ ದೊರೆಯುವಂತೆ ಮಾಡಬೇಕು. ಇಲ್ಲವಾದದೆ ನಿಮ್ಮ ವಿರುದ್ಧ ನಿರಂತರವಾಗಿ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

ಈ ವೇಳೆ ಶೇಖು ಆಲೂರ, ಸಿ ಜಿ ವಿಜಯಕರೆ, ನ್ಯಾಯವಾದಿ ಕೆ. ಬಿ ದೊಡಮನಿ, ಪ್ರಕಾಶ ಸರೂರ, ಪ್ರಶಾಂತ ಕಾಳೆ, ಆನಂದ ಗಂಗೂರ, ಆನಂದ ದೇವೂರ, ಸುರೇಶ ಮಾದರ, ತಪ್ಪಣ್ಣ ದೊಡಮನಿ, ಆನಂದ ಮದೂರು, ಬಾಲು ಹುಲ್ಲೂರ, ಪರುಶುರಾಮ ಬಸರಕೋಡ, ದೇವರಾಜ ಹಂಗರಗಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X