ರಾಯಚೂರು | ಕರಾಳ ಕಾರ್ಮಿಕ ಕಾಯ್ದೆ ರದ್ದತಿಗೆ ಸಂಯುಕ್ತ ಕಾರ್ಮಿಕ ಸಂಘಟನೆಗಳು ಒತ್ತಾಯ

Date:

Advertisements

ರೈತರು ಹಾಗೂ ಕಾರ್ಮಿಕರ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಪ್ರತಿಭಟನಾ ದಿನವನ್ನಾಗಿ ಆಚರಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಯಚೂರು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಮಿಕರ ನಾಲ್ಕು ಸಂಹಿತೆಗಳನ್ನು ರದ್ದುಗೊಳಿಸಿ, ಕಾರ್ಮಿಕರ ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕೆಂದು ಆಗ್ರಹಿಸಿದರು.

“ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗೆ ₹26,000ದಂತೆ ಜಾರಿಗೊಳಿಸಿ ಹಾಗೂ ತಿಂಗಳಿಗೆ ₹10,000 ಪಿಂಚಣಿ ನೀಡಬೇಕು. ಜತೆಗೆ ಸಂಘಟಿತ, ಅಸಂಘಟಿತ, ಯೋಜನೆ ಕಾರ್ಯಕರ್ತರು, ಗುತ್ತಿಗೆ ಕಾರ್ಮಿಕರು, ಕೃಷಿ ವಲಯ ಸೇರಿದಂತೆ ಎಲ್ಲ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಒದಗಿಸಿಕೊಡಬೇಕು” ಎಂದು ಒತ್ತಾಯಿಸಿದರು.

Advertisements

“ಇತ್ತೀಚಿನ ದಿನಗಳಲ್ಲಿ ಸಾಲಬಾಧೆಯಿಂದ ರೈತರು ಆತ್ಮಹತ್ಯೆಗೆ ಗುರಿಯಾಗುತ್ತಿದ್ದಾರೆ. ಇದನ್ನು ಕೊನೆಗೊಳಿಸಲು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಖಚಿತಪಡಿಸಬೇಕು. ರಕ್ಷಣಾ, ರೈಲ್ವೆ, ಆರೋಗ್ಯ, ಶಿಕ್ಷಣ, ವಿದ್ಯುತ್ ಸೇರಿದಂತೆ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಸಾರ್ವಜನಿಕ ಸೇವೆಗಳ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು” ಎಂದರು.

“ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸುವುದು ಬೇಡ. ಗೃಹಬಳಕೆದಾರರಿಗೆ ಮತ್ತು ಅಂಗಡಿಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಿ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಅತಿಕ್ರಮಿಸುತ್ತವೆ ಮತ್ತು ಕೃಷಿಯ ಕಾರ್ಪೊರೇಟೀಕರಣವನ್ನು ಸುಗಮಗೊಳಿಸುತ್ತವೆ. ಹಾಗಾಗಿ ಇದಕ್ಕೆ ಕಡಿವಾಣ ಹಾಕಬೇಕು” ಎಂದು ಆಗ್ರಹಿಸಿದರು.

“ಉದ್ಯೋಗ ಖಾತ್ರಿ ಯೋಜನೆಯಡಿ ₹600ಗೆ ಕೂಲಿ ಹೆಚ್ಚಿಸಬೇಕು. ಕನಿಷ್ಠ 200 ಮಾನವದಿನ ಕೆಲಸವನ್ನು ಎಲ್ಲರಿಗೂ ನೀಡಬೇಕು. ಬಾಕಿಯಿರುವ ಕೂಲಿ ಪಾವತಿಸಬೇಕು. ಬೆಳೆಗಳು ಮತ್ತು ಜಾನುವಾರುಗಳಿಗೆ ಸಮಗ್ರ ಸಾರ್ವಜನಿಕ ವಲಯದ ವಿಮಾ ಯೋಜನೆ, ಬೆಳೆವಿಮೆ ಮತ್ತು ಗೇಣಿದಾರ ರೈತರಿಗೆ ಎಲ್ಲ ಯೋಜನೆಗಳ ಪ್ರಯೋಜನಗಳನ್ನು ಖಚಿತಪಡಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮೂಡನಿಡಂಬೂರು ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

“ಜಿಲ್ಲೆಯಲ್ಲಿ ಭತ್ತ, ತೊಗರಿ, ಜೋಳ, ಖರೀದಿ ಕೇಂದ್ರಗಳನ್ನು ತೆರೆಯಬೇಕು, ಏಮ್ಸ್ ಸ್ಥಾಪನೆ ಮಾಡಬೇಕು, ವಿಮಾನ ನಿಲ್ದಾಣದ ಕಾಮಗಾರಿ ಪ್ರಾರಂಭಿಸಬೇಕು, ಮೆಣಸಿನಕಾಯಿ ಮಾರುಕಟ್ಟೆಯನ್ನು ಸ್ಥಾಪನೆ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಕೆ ಜಿ ವೀರೇಶ, ಪ್ರಭಾಕರ ಪಾಟೀಲ್, ಅಮಿನ್ ಪಾಷಾ ದಿದ್ದಗಿ, ವೀರೇಶ ಎನ್ ಎಸ್, ಮಲ್ಲನಗೌಡ, ಕರಿಯಪ್ಪ ಅಚ್ಚೊಳಿ, ಎಸ್ ಮಾರೆಪ್ಪ, ಗೋಪಾಲ ರಾಂಪೂರ, ಡಿ ಎಸ್ ಶರಣಬಸವ, ಆಂಜನೇಯ ಕುರುಬದೊಡ್ಡಿ, ಕೆ ರಂಗನಾಥ ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X