ರಾಯಚೂರು | ಬಿಹಾರದ ಬೋಧ್ ಗಯಾವನ್ನು ಸಂಪೂರ್ಣ ಬೌದ್ಧರಿಗೆ ನೀಡಬೇಕು: ಬೌದ್ಧ ಮಹಾಸಭಾ ಸಂಘ

Date:

Advertisements

ಸಂವಿಧಾನದ ದಿನಾಚರಣೆ ಪ್ರಯುಕ್ತ ಬೌದ್ಧರ ಧಾರ್ಮಿಕ ಹಕ್ಕುಗಳಿಗಾಗಿ ಬಿಹಾರದ ಬೋಧ್ ಗಯಾದ ಮಹಾಭೋದಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಬೌದ್ಧ ಮಹಾಸಭಾ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

“ಬಿಹಾರದ ಬುದ್ದಗಯಾದ ಮಹಾಭೋದಿ, ಮಹಾವಿಹಾರವನ್ನು ಸಂಪೂರ್ಣ ಬೌದ್ಧರಿಗೆ ನೀಡಬೇಕು ಹಾಗೂ ಬಿಟಿ ಕಾಯ್ದೆ 1949ನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದರು.

ಎಲ್ಲ ಧರ್ಮೀಯರಿಗೆ ಧಾರ್ಮಿಕ ಕೇಂದ್ರಗಳ ಆಡಳಿತವನ್ನು ನಿರ್ವಹಿಸು ಸಂವಿಧಾನದಲ್ಲಿ ಅವಕಾಶ ನೀಡಲಾಗಿದೆ. ಗುರುದ್ವಾರವನ್ನು ಸಿಖ್‌ ಧರ್ಮೀಯರು, ದರ್ಗಾಗಳನ್ನು ಮುಸ್ಲಿಮರು ಹಾಗೂ ಓರಿಸ್ಸಾದ ಜಗನ್ನಾಥ ಮಂದಿರ, ಕೇರಳದ ಗುರುವಾಯುರ್ ದೇವಸ್ಥಾನ, ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಪ್ರದೇಶದ ಕಾಶಿ, ಶ್ರೀಶೈಲ, ತಿರುಪತಿ, ಕಾಶ್ಮೀರ ವೈಷ್ಣವಿದೇವಿ ದೇವಾಲಯಗಳನ್ನು ಹಿಂದುಗಳಿಗೆ ಪೂಜೆ ಹಾಗೂ ಆಡಳಿತ ಮಂಡಳಿ ನಿರ್ವಹಣೆ ಮಾಡಲು ಅಧಿಕಾರ ನೀಡಲಾಗಿದೆ. ಆದರೆ ಬೌದ್ದರು ಆರಾಧಿಸುವ ಬುದ್ದಗಯಾವನ್ನು ಬೌದ್ದ ಧರ್ಮಿಯರಿಗೆ ನೀಡುತ್ತಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು ನಗರದ 31ನೇ ವಾರ್ಡ್‌ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು

“ಬುದ್ದಗಯಾ ಹಿಂದುಗಳ ನಿಯಂತ್ರಣದಲ್ಲಿದ್ದು, ಬೌದ್ದ ಧರ್ಮಿಯರಿಗೆ ನೀಡಲು ಅವಕಾಶ ಕೊಡಬೇಕು. ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿರುವಾಗ ಸಂವಿಧಾನ ಬದ್ದವಾದ ಧಾರ್ಮಿಕ ಅವಕಾಶಗಳಿಂದ ಬೌದ್ದರನ್ನು ವಂಚಿಸುವುದನ್ನು ನಿಲ್ಲಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರವೀಂದ್ರನಾಥ ಪಟ್ಟಿ, ಮಹಾಸಭಾ ಅದ್ಯಕ್ಷ ಶಿವರಾಜ ಜಾನೇಕಲ್, ಬಸವರಾಜ, ವಿಶ್ವನಾಥ ಪಟ್ಟಿ, ಮಹೇಶ, ನರಸಿಂಹಲು, ರವಿ ರಾಂಪುರು, ಮಾರೆಪ್ಪ ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X