ಉಡುಪಿ | ಸಂವಿಧಾನದಿಂದ ಗೌರವ ಸಿಗದವರು ಪಾಕಿಸ್ತಾನಕ್ಕೆ ಹೋಗಲಿ – ಸುಂದರ್ ಮಾಸ್ಟರ್

Date:

Advertisements

ಇತ್ತೀಚೆಗೆ ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ಸ್ವಾಮೀಜಿ ಯವರು ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು ಎಂದಿದ್ದಾರೆ. ನಮ್ಮನ್ನು ಎಂದರೆ ಯಾರನ್ನು ವೈದಿಕರನ್ನೋ, ಬ್ರಾಹ್ಮಣ್ಯಾ ಕಾಪಾಡುವವರನ್ನೋ, ಇಲ್ಲ ಪಂಕ್ತಿ ಬೇದ ಮಾಡುವವರನ್ನೋ ವಿವರವಾಗಿ ಹೇಳಿ ಸ್ವಾಮಿಗಳೇ. ಈ ದೇಶದಲ್ಲಿ ಕೇವಲ 3 ಶೇಕಡ ಇರುವವರು ಸಂವಿಧಾನ ದತ್ತವಾಗಿ 10 ಶೇಕಡ ಮೀಸಲಾತಿ ಪಡೆದಕೊಂಡಾಗ ನಿಮಗೆ ನಾಚಿಕೆಯಾಗಲಿಲ್ಲವೇ ಸ್ವಾಮಿಗಳೇ, ಆಗ ಏಕೆ ಇದನ್ನು ವಿರೋಧಿಸಲಿಲ್ಲ ಆಗ ಸಂವಿಧಾನ ದಿಂದ ನಿಮ್ಮ ಗೌರವ ಹೆಚ್ಚಾಗಿತ್ತೇ ಮಠಾದೀಶರೇ, ಎಲ್ಲಕ್ಕಿಂತಲೂ ಮಿಗಿಲಾಗಿ ತಾವು ಧರ್ಮ ಪ್ರಚಾರಕ ಮಠಾಧೀಶರೋ ಇಲ್ಲಾ ಚುನಾವಣಾ ಸೀಟಿಗೋಸ್ಕರ ಸದಾ ಪ್ರಚಾರ ಬಯಸುವ ಒಬ್ಬ ರಾಜಕಾರಣಿಯೋ ದಯವಿಟ್ಟು ಹೇಳಿ ಸ್ವಾಮೀಜಿಯವರೇ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಮಾಧ್ಯಮದ ಮೂಲಕ ಪೇಜಾವರ ಶ್ರೀ ಯವರಿಗೆ ಪ್ರಶ್ನಿಸಿದ್ದಾರೆ.

ಭಾರತದ ಸಂವಿಧಾನ ಪ್ರಪಂಚದಲ್ಲೇ ಸರ್ವಶ್ರೇಷ್ಠ ಸಂವಿಧಾನ ಎಂದು ಮನ್ನಣೆ ಪಡೆದಿದೆ. ಇಲ್ಲಿನ ಸಂವಿಧಾನದಲ್ಲಿ ಸಮಾನತೆ, ಸಹೋದರತೆ, ಭ್ರಾತ್ರತ್ವ, ಸ್ವಾತಂತ್ರ್ಯ ಎಲ್ಲವೂ ಅಡಗಿದೆ.
ಈ ದೇಶದ ಮೂಲನಿವಾಸಿಗಳು ಬಹುಸಂಖ್ಯಾತರು ಈ ಸಂವಿಧಾನದ ಅಡಿಯಲ್ಲಿ ನೆಮ್ಮದಿಯಿಂದ ಇದ್ದು ಈ ಸಂವಿಧಾನವನ್ನು ಒಪ್ಪಿಕೊಂಡಿದ್ದಾರೆ. ಆರ್ಯರು ಈ ದೇಶಕ್ಕೆ ಹೊರಗಿನಿಂದ ಬಂದವರು. ಯಾರಿಗೆ ಈ ಸ್ವತಂತ್ರ ಭಾರತದ ಸಂವಿಧಾನದಲ್ಲಿ ನಂಬಿಕೆ ಇಲ್ಲವೋ, ಯಾರು ನಮ್ಮ ಸಂವಿಧಾನವನ್ನು ಗೌರವಿಸುವುದಿಲ್ಲವೋ ಅಂತಹವರು ಗೌರವ ಅರಸಿಕೊಂಡು ಪಾಕಿಸ್ತಾನಕ್ಕೆ ಹೋಗಲೀ. ಈ ದೇಶದ ಬಹುಸಂಖ್ಯಾತರಾದ ನಾವಂತೂ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾಗಲು ಬಿಡುವುದಿಲ್ಲ. ಜಾತಿ ಪಧ್ಧತಿ, ಅಸ್ಪೃಶ್ಯತೆ, ಮೇಲು ಕೀಳೆಂಬ ಆಚರಣೆಯಲ್ಲಿ ನಂಬಿಕೆ ಇಟ್ಟವರಿಂದ ಮಾತ್ರ ಈ ರೀತಿಯ ಹೇಳಿಕೆ ಬರಲು ಸಾಧ್ಯ. ತಮ್ಮ ಈ ಹೇಳಿಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X