ತುರುವೇಕೆರೆ | ಅನುಭದಲ್ಲಿರುವವರಿಗೆ  ಭೂಮಿ ಮಂಜೂರು ಮಾಡಲು ರೈತರ ಮನವಿ 

Date:

Advertisements

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಗೆ ಸೇರಿದ ಗುಡ್ಡೇನಹಳ್ಳಿಯ ಸರ್ವೆ ನಂಬರ್ 7,8,15,16,27 ರಲ್ಲಿ ಹಲವಾರು ವರ್ಷಗಳಿಂದ ಅನುಭವದಲ್ಲಿರುವ ರೈತಾಪಿಗಳಿಗೇ ಜಮೀನನ್ನು ಮಂಜೂರು ಮಾಡಿಕೊಡಬೇಕೆಂದು ಗುಡ್ಡೇನಹಳ್ಳಿಯ ಗ್ರಾಮಸ್ಥರು ತಹಸೀಲ್ದಾರ್ ಎನ್.ಎ.ಕುಂಇ ಅಹಮದ್ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

 ಗುಡ್ಡೇನಹಳ್ಳಿಯಲ್ಲಿ ಸಾಕಷ್ಟು ಮಂದಿ ಬಡವರಿದ್ದಾರೆ. ಅವರಿಗೆ ಈಗಾಗಲೇ ಅನುಭವದಲ್ಲಿರುವ ಜಮೀನುಗಳೇ ಜೀವನಾಧಾರವಾಗಿದೆ. ಈಗ ರೈತರು ಅನುಭವದಲ್ಲಿರುವ ಜಮೀನುಗಳು ಅರಣ್ಯ ಇಲಾಖೆಗೆ ಸೇರಬೇಕೆಂದು ಹೇಳಿ ಕೆಲವರಿಗೆ ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ಸುಮಾರು 30 ವರ್ಷಗಳಿಂದಲೂ ಅನುಭವದಲ್ಲಿರುವ ಹಲವಾರು ರೈತಾಪಿಗಳು ಆ ಜಮೀನಿನಲ್ಲಿ ತೆಂಗು, ಅಡಿಕೆ, ಮನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಜಮೀನುಗಳಿಗೆ ಸಂಬಂಧಿಸಿದಂತೆ 1998  ರಲ್ಲೇ ಸಂಬಂಧಿಸಿದ ಇಲಾಖೆಗಳಿಗೆ ಜಮೀನು ಮಂಜೂರು ಮಾಡುವಂತೆ ಮನವಿಯನ್ನೂ ಸಹ ಸಲ್ಲಿಸಲಾಗಿದೆ. 

 ಇದುವರೆಗೂ ಸುಮ್ಮನಿದ್ದ ಅರಣ್ಯ ಇಲಾಖೆ ಈಗ ಆ ಎಲ್ಲಾ ಜಮೀನುಗಳು ತಮ್ಮ ಇಲಾಖೆಗೆ ಸೇರಿದ್ದು ಎಂದು ಹೇಳುತ್ತಿರುವುದು ಸರಿಯಲ್ಲ. ಅನುಭವದಲ್ಲಿರುವ ಜಮೀನನ್ನು ಹೊರೆತುಪಡಿಸಿ ಇನ್ನೂ ಸಾಕಷ್ಟು ಸರ್ಕಾರಿ ಜಮೀನು ಇದೆ. ಇಲ್ಲಿ ಯಾರೂ ಉಳುಮೆ ಮಾಡಿಲ್ಲ. ಆ ಜಮೀನುಗಳತ್ತ ಅರಣ್ಯ ಇಲಾಖೆಯವರು ಗಮನ ಹರಿಸಿ ಉಳಿಸಿಕೊಳ್ಳಲಿ ಎಂದು ಗ್ರಾಮದ ಮುಖಂಡರಾದ ವಿಎಸ್‌ಎಸ್‌ಎನ್ ನ ಮಾಜಿ ಅಧ್ಯಕ್ಷರಾದ ಬಸವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಮುಕುಂದ್, ಕೆಂಚಪ್ಪ, ಕೃಷ್ಣಪ್ಪ ಸೇರಿದಂತೆ ಹಲವಾರು ಮಂದಿ ತಹಸೀಲ್ದಾರ್ ರವರಿಗೆ ಮನವಿ ಮಾಡಿಕೊಂಡಿದ್ದಾರೆ.

Advertisements

 ಹಲವರು ವರ್ಷಗಳಿಂದ ಭೂಮಿಯ ಅನುಭವದಲ್ಲಿರುವ ರೈತರನ್ನು ಒಕ್ಕಲೆಬ್ಬಿಸಿದಲ್ಲಿ ರೈತರ ಜೀವನಕ್ಕೇ ಕೊಡಲಿ ಪೆಟ್ಟು ಹಾಕಿದಂತಾಗುತ್ತದೆ. ಆದ್ದರಿಂದ ಸದ್ಯ ಅನುಭವದಲ್ಲಿರುವ ಭುಮಿಯನ್ನು ಕೂಡಲೇ ಸಂಬಂಧಿಸಿದ ರೈತರಿಗೇ ಹಕ್ಕುಪತ್ರ ನೀಡುವ ಮೂಲಕ ಅವರಿಗಿರುವ ಆತಂಕವನ್ನು ದೂರಮಾಡಬೇಕೆಂದು ರೈತ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

 ಈ ಸಂಧರ್ಭದಲ್ಲಿ ಗ್ರಾಮದ ಹಲವಾರು ಮುಖಂಡರು ತಹಸೀಲ್ದಾರ್ ರವರನ್ನು ಭೇಟಿಯಾಗಿದ್ದರು. 

ವರದಿ- ಎಸ್. ನಾಗಭೂಷಣ್

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X