ಮದ್ದೂರು | ಸಂವಿಧಾನದ ಆಶಯಗಳ ಜಾರಿಗೆ ಕಟಿಬದ್ಧತೆಯಿಂದ ಶ್ರಮಿಸೋಣ: ಗ್ರಾ. ಪಂ. ಅಧ್ಯಕ್ಷೆ ಗೌರಮ್ಮ

Date:

Advertisements

ಸಂವಿಧಾನದ ಆಶಯಗಳ ಯಶಸ್ವಿ ಜಾರಿಗಾಗಿ ಕಟಿಬದ್ದತೆಯಿಂದ ಶ್ರಮಿಸುವ ಮೂಲಕ ಸಮಾನತೆ ಭಾತೃತ್ವಗಳ ಯಶಸ್ವಿ ಜಾರಿಯ ಮೂಲಕ ಸರ್ವಜನರ ಹಿತ ಕಾಯಬೇಕಾದ ಹೊಣೆ ಆಡಳಿತ ವರ್ಗಕ್ಕಿದೆ. ಅದಕ್ಕಾಗಿ ಕಟಿಬದ್ದತೆಯಿಂದ ಶ್ರಮಿಸೋಣ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ಕರೆ ನೀಡಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ‌ ಗ್ರಾಮ ಪಂಚಾಯಿತಿ ಹಾಗೂ ಅರಿವು ಕೇಂದ್ರ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ‌ ಮಾಡಿ ಮಾತನಾಡಿದರು.

“ಸ್ವಾತಂತ್ರ್ಯ ಬಂದ ನಂತರ ಭಾರತ ತನ್ನದೇ ಸಂವಿಧಾನ ಹೊಂದುವ ಮೂಲಕ ಸರ್ವಜನಾಂಗದ ಹಿತಕ್ಕಾಗಿ ಶ್ರಮಿಸುತ್ತಿದೆ. ಇಂದು ಎಲ್ಲ ಜನರೂ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಿದೆ. ನವೆಂಬರ್ 26ರಂದು ಸಂವಿಧಾನ ಅಳವಡಿಕೆಗೆ ಚಾಲನೆ ಸಿಕ್ಕ ದಿನವಾಗಿದೆ. ಈ ದಿನವನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ. ಈ ದಿನದಂದು ಸಂವಿದಾನದ ಆಶಯ ಹಾಗೂ ಮೌಲ್ಯಗಳ ಕುರಿತು ಮನನ ಮಾಡಿಕ್ಕೊಳ್ಳುವ, ಗೌರವಿಸುವ ಮತ್ತು ಸಂವಿಧಾನದ ಯಶಸ್ವಿ ಜಾರಿಗಾಗಿ ಸಂಕಲ್ಪ ಬದ್ದರಾಗುವ ದಿನವಾಗಿದೆ” ಎಂದು ಪಿಡಿಒ ಪೂರ್ಣಿಮಾ ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಎತ್ತಂಗಡಿ ಭೀತಿಯಲ್ಲಿ ತಮಿಳು ಕಾಲೋನಿ ನಿವಾಸಿಗಳು: ‘ಜಾಗ ಬಿಟ್ಟು ಕದಲಲ್ಲ’ ಎಂದ ಜನ

ಅರಿವು ಕೇಂದ್ರದ ಮಾಹಿತಿದಾರ ಚನ್ನಸಂದ್ರ ವಿವೇಕ್ ಮಾತನಾಡಿ, “ಇಂದಿನ ಮಕ್ಕಳು ಸಂವಿಧಾನ ಓದು ಹಾಗೂ ಅಧ್ಯಯನ ಮಾಡುವ ಮೂಲಕ ಜವಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು” ಎಂದು ಸಲಹೆ ನೀಡಿದರು.

ಇದೇ ವೇಳೆ ಗೊರವನಹಳ್ಳಿ‌ ಸರ್ಕಾರಿ ಶಾಲೆಯ ಮಕ್ಕಳಿಗೆ ಸಂವಿಧಾನದ ಪೀಠಿಕೆ ಓದಿಸಿ ಸಂವಿಧಾನ ದಿನಾಚರಣೆಯನ್ನು ಆರ್ಥಪೂರ್ಣವಾಗಿ ಆಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X