ರಾಯಚೂರು | ಅಂಬೇಡ್ಕರ್‌ಗೆ ಭಾರತ ರತ್ನ ನೀಡದೇ ಅವಮಾನಗೈದ ಕಾಂಗ್ರೆಸ್ ನಿಜವಾದ ಸಂವಿಧಾನ ವಿರೋಧಿ: ಶಾಸಕ ಯತ್ನಾಳ್

Date:

Advertisements

ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿಲ್ಲ. ತಮಗೆ ತಾವೇ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ , ರಾಜೀವಗಾಂಧಿ ಅವರು ಭಾರತ ರತ್ನ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದೇ ಅವಮಾನ ಮಾಡಿದ ಕಾಂಗ್ರೆಸ್ ನಿಜವಾದ ಸಂವಿಧಾನ ವಿರೋಧಿ ಶಾಸಕ ಬಸನಗೌಡ ಪಾಟೀಲ್ ತಿಳಿಸಿದರು.

ರಾಯಚೂರಿನ ಅತ್ತನೂರ್ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ವಕ್ಫ್ ಭೂಕಬಳಿಕೆ ವಿರೋಧಿ ಜನಜಾಗೃತಿ ಹೋರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಸಂವಿಧಾನ ವಿರೋಧಿ ಎಂದು ಹೇಳುವ ಕಾಂಗ್ರೆಸ್ ನಾಯಕರೇ ಸಂವಿಧಾನ ವಿರೋಧಿಗಳು, ಸಂವಿಧಾನ ಬರೆದ ಬಾಬಾ ಸಾಹೇಬರಿಗೆ ಅವಮಾನ ಮಾಡಿದ್ದಾರೆ. ಸತ್ತಾಗ ಜಾಗ ನೀಡಲಿಲ್ಲ. ಇದ್ದಾಗ ಸರಿಯಾಗಿ ನಡೆದುಕೊಂಡಿಲ್ಲ ಎಂದು ದೂರಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಅನೇಕ ನಾಯಕರು ಲೋಕಸಭೆ ಚುನಾವಣೆಗೂ ಮೊದಲು ಅಪಪ್ರಚಾರ ಮಾಡಿದ್ದರು. ಆದರೆ, ಅಟಲ್ ಬಿಹಾರಿ ವಾಜಪೇಯಿ ಅವಧಿಯಲ್ಲಿ ಹಾಗೂ ನರೇಂದ್ರ ಮೋದಿ ಅವರ 10 ವರ್ಷದ ಆಡಳಿತದಲ್ಲಿ ಸಂವಿಧಾನ ಬದಲಾಯಿಸಿದ್ದಾರಾ? ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದೇ ಅವಮಾನ ಮಾಡಿದ ಕಾಂಗ್ರೆಸ್ ನಿಜವಾದ ಸಂವಿಧಾನ ವಿರೋಧಿ ಎಂದರು.

Advertisements

ಕಳೆದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಈ ಬಾರಿ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಿಗೆ ಮುಖಭಂಗವಾಗಿದೆ. ದೇಶದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ವಿರುದ್ಧ ವಕ್ಫ್ ನಡೆಯುತ್ತಿದ್ದು ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ನಮ್ಮ ಅಪ್ಪನ್ ಆಸ್ತಿ ಎಂದು ಮಾತನಾಡುತ್ತಾರೆ. ಇದರ ವಿರುದ್ಧ ಬೀದಿಗಿಳಿದ ಹೋರಾಟ ಮಾಡಬೇಕಿದೆ ಎಂದರು.

ಬಿಜೆಪಿ ವಿರುದ್ದ ಸುಳ್ಳು ಕಂತೆ ಸೃಷ್ಟಿಸಲಾಗುತ್ತಿದೆ. ಈಗ ಯಾವ ಎಲೆಕ್ಷನ್ ಇಲ್ಲ. ಆದರೆ ರೈತರು, ಮಠ,ಮಂದಿರಗಳ ವಕ್ಫ್‌ ಎಂದು ನಮೂದಿಸುವ ಕುತಂತ್ರದ ವಿರುದ್ದ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ನಾನು ಸೇರಿದಂತೆ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ನಾಲ್ಕೈದು ಬಾರಿ ಶಾಸಕರು, ಸಚಿವರಾಗಿದ್ದೇವೆ. ನಮಗೇನು ಅಧಿಕಾರದ ಹುಚ್ಚು ಹಿಡಿದಿಲ್ಲ. ಈಗ ಚುನಾವಣೆಯೂ ಇಲ್ಲ. ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ , ಪಕ್ಷವನ್ನು ತಳಮಟ್ಟದಿಂದ ಗಟ್ಟಿಯಾಗಿ ಕಟ್ಟುವುದಕ್ಕೆ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ ಸಿಗಲು ಆಗ್ರಹಿಸಿ ಪ್ರತಿಭಟನೆ

ಮಾಜಿ ಸಚಿವ ರಮೇಶ ಜಾರಕಿಹೊಳಿ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ, ಮಾಜಿ ಸಂಸದ ಬಿ.ವಿ. ನಾಯಕ, ಮುಖಂಡರಾದ ರಮಾನಂದ ಯಾದವ್, ಆಂಜನೇಯ, ನರಸಪ್ಪ ಯಕ್ಲಾಸಪೂರ, ಕೊಟ್ರೇಶಪ್ಪ ಕೋರಿ, ಹರೀಶ, ಸಂತೋಷ, ಶಶಿಧರ ಮಸ್ಕಿ, ಭೀಮೇಶ, ಬಂಡೇಶ ವಲ್ಕಂದಿನ್ನಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X