ಹಾಸನ l ಎತ್ತಿನಹೊಳೆ ಯೋಜನೆಯಿದ್ದರೂ ನೀರಿನ ಹಾಹಾಕಾರ ತಪ್ಪಿಲ್ಲ: ಜಾನೆಕೆರೆ ಗ್ರಾಮಸ್ಥರ ಅಳಲು

Date:

Advertisements

ಅರೆ ಮಲೆನಾಡು ಎಂದೆನಿಸಿಕೊಂಡಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಹಸಿರಿನಿಂದ ಕೂಡಿದ್ದು, ಅನೇಕ ಪ್ರವಾಸಿ ತಾಣಗಳಿಗೆ ಹೆಸರುವಾಸಿಯಾಗಿದೆ. ಇತ್ತೀಚಿಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ನಾಯಕರು ಒಗ್ಗೂಡಿ ಎತ್ತಿನಹೊಳೆ ಯೋಜನೆಯನ್ನು ಉದ್ಘಾಟನೆ ಮಾಡಿದ್ದರು.

Screenshot 2024 11 27 21 44 12 45 6012fa4d4ddec268fc5c7112cbb265e7

ಎತ್ತಿನಹೊಳೆ ಯೋಜನೆಯ ಮೂಲಕ ಅರ್ಧ ರಾಜ್ಯಕ್ಕೆ ಕುಡಿಯುವ ನೀರು ಕೊಟ್ಟ ಹೆಗ್ಗಳಿಕೆ ಸಕಲೇಶಪುರ ತಾಲೂಕಿಗೆ ಇದೆ. ಆದರೆ, ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾನೆಕೆರೆ ಗ್ರಾಮದಲ್ಲಿ ವಾಸಿಸುವ ನಿವಾಸಿಗಳು ಮಾತ್ರ ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಸಕಲೇಶಪುರ ಪಟ್ಟಣದಿಂದ ಕೇವಲ ಐದಾರು ಕಿಲೋಮೀಟರ್ ದೂರದಲ್ಲಿ ಜಾನೆಕೆರೆ ಎಂಬ ಗ್ರಾಮವಿದೆ. ಈ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಮೂಲ ನಿವಾಸಿಗಳು, ಒಕ್ಕಲಿಗ, ಶೆಟ್ಟಿ, ಲಿಂಗಾಯತ ಹಾಗೂ ದಲಿತ ಸಮುದಾಯದವರು ಸೇರಿದಂತೆ 25ರಿಂದ 30 ಕುಟುಂಬದವರು ವಾಸ ಮಾಡುತ್ತಿದ್ದಾರೆ. ಆದರೆ ಮೂಲಭೂತ ಸೌಕರ್ಯ ಮಾತ್ರ ಶೂನ್ಯವಾಗಿದೆ.

Advertisements
Screenshot 2024 11 27 21 46 42 34 6012fa4d4ddec268fc5c7112cbb265e7

“ಕುಡಿಯುವ ನೀರು ಸೇರಿದಂತೆ, ಆನೇಕ ಸೌಲಭ್ಯದಿಂದ ಗ್ರಾಮಸ್ಥರು ವಂಚಿತರಾಗಿದ್ದಾರೆ. ಪ್ರತಿದಿನ ಕುಡಿಯುವ ನೀರಿಗಾಗಿ ಒಂದೆರಡು ಕಿಲೋಮೀಟ‌ರ್ ಅಲೆದಾಡಿ ಬಿಂದಿಗೆಗಳಿಗೆ ನೀರು ತುಂಬಿಸಿ ತಲೆಯ ಮೇಲೆ ಬಿಂದಿಗೆ ಹೊತ್ತು ಅಥವಾ ಬೈಕ್‌ಗಳ ಮೂಲಕ ನೀರು ಹೊತ್ತೊಯ್ಯುವ ಪರಿಸ್ಥಿತಿ ಎದುರಾಗಿದೆ” ಎಂದು ಗ್ರಾಮಸ್ಥ ಸಾಗರ್ ಈ ದಿನ.ಕಾಮ್ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.

Screenshot 2024 11 27 21 44 26 91 6012fa4d4ddec268fc5c7112cbb265e7

ಸಕಲೇಶಪುರ ತಾಲೂಕಿನಿಂದ ಎತ್ತಿನಹೊಳೆ ಯೋಜನೆಯ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ನೂರಾರು ಕಿಲೋಮೀಟರ್‌ವರೆಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿ ಈ ಗ್ರಾಮದಲ್ಲಿ ನಿರ್ಮಾಣವಾಗಿರುವುದು ನಿಜಕ್ಕೂ ದುರದೃಷ್ಟವೇ ಎನ್ನಬಹುದು.

ಇದನ್ನೂ ಓದಿದ್ದೀರಾ?ಹಾಸನ l ಪ್ರೇಯಸಿ ಕೊಲೆಗೆ ಯತ್ನ; ಆರೋಪಿ ಮೋಹಿತ್ ಬಂಧನ

“ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಅಷ್ಟೇ ಅಲ್ಲದೆ, ವಿದ್ಯುತ್‌ ಕಂಬದಲ್ಲಿ ದೀಪ, ರಸ್ತೆ ಸಂಪರ್ಕವಿಲ್ಲದೆ ಸ್ಥಳೀಯರು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಆದರೆ, ಇಲ್ಲಿ ದಲಿತ ಸಮುದಾಯಕ್ಕೆ ಸೇರಿದ ನಾಲ್ಕು ಕುಟುಂಬಗಳು ಮಾತ್ರ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಲವಾರು ಸಮಸ್ಯೆಗಳಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಬೇಸರ ತಂದಿದೆ. ಈ ವಿಚಾರ ಕುರಿತು ಸಂಬಂಧಪಟ್ಟ ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಆದಷ್ಟು ಬೇಗ ಈ ಭಾಗದ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಸ್ಥಳೀಯರು ಒತ್ತಾಯಿಸಿದರು.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X