ಮಾಂಸಾಹಾರ ತಿನ್ನದಂತೆ ಕಿರುಕುಳ: ನೇಣಿಗೆ ಶರಣಾದ ಏರ್ ಇಂಡಿಯಾ ಪೈಲಟ್‌, ಪ್ರಿಯಕರ ಬಂಧನ

Date:

Advertisements

ಆಹಾರ ಪದ್ಧತಿ ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರ ಸೇವಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾದ ಮಹಿಳಾ ಪೈಲಟ್ ನೇಣಿಗೆ ಶರಣಾದ ಘಟನೆ ಮುಂಬೈನ ಅಂಧೇರಿಯ ಮರೋಲ್ ಪ್ರದೇಶದಲ್ಲಿ ನಡೆದಿದೆ.

25 ವರ್ಷದ ಸೃಷ್ಟಿ ತುಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೃಷ್ಟಿ ಬಾಯ್​ಫ್ರೆಂಡ್ 27 ವರ್ಷದ ಆದಿತ್ಯ ಪಂಡಿತ್‌ನನ್ನು ಪೊವೈ ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಬೆಳಗ್ಗೆ ಅಂಧೇರಿ(ಪೂರ್ವ)ಯಲ್ಲಿರುವ ಮರೋಲ್ ಪೊಲೀಸ್ ಕ್ಯಾಂಪ್‌ನ ಹಿಂಭಾಗದ ಬಾಡಿಗೆ ನಿವಾಸದಲ್ಲಿ ತುಲಿ ಶವವಾಗಿ ಪತ್ತೆಯಾಗಿದ್ದಾಳೆ. ತನ್ನ ಬಾಯ್ ಫ್ರೆಂಡ್ ಜೊತೆಗಿನ ಜಗಳದ ನಂತರ ಆಕೆ ಡೇಟಾ ಕೇಬಲ್‌ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಸೃಷ್ಟಿ ತುಲಿ ಉತ್ತರ ಪ್ರದೇಶ ಮೂಲದವರಾಗಿದ್ದು, ಕಳೆದ ವರ್ಷ ಜೂನ್‌ನಿಂದ ಮುಂಬೈನಲ್ಲಿ ನೆಲೆಸಿದ್ದರು. ಅವಳು ಮತ್ತು ಆದಿತ್ಯ ಪಂಡಿತ್ ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ವಾಣಿಜ್ಯ ಪೈಲಟ್ ಕೋರ್ಸ್ ಓದುತ್ತಿದ್ದಾಗ ಪರಸ್ಪರ ಪ್ರೇಮಕ್ಕೆ ಹೊರಳಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ಆದಿತ್ಯ ಪಂಡಿತ್ ಮಾಂಸಾಹಾರ ಸೇವಿಸದಂತೆ ಸೃಷ್ಟಿಯನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಸಾಕಷ್ಟು ಚರ್ಚೆಯಾಗಿ ಆಕೆಯ ಅರ್ಧದಾರಿಯಲ್ಲೇ ಬಿಟ್ಟು ಆದಿತ್ಯ ಮನೆ ಕಡೆಗೆ ತೆರಳಿದ್ದಾನೆ. ಬಳಿಕ ಸೃಷ್ಟಿ ರವಿವಾರ ಸಂಜೆ ಕೆಲಸದ ಅವಧಿ ಮುಗಿಸಿ ವಾಪಸ್ ಬಂದ ಮೇಲೂ ಆಕೆಯ ಮನೆಯಲ್ಲಿ ಜಗಳವಾಡಿದ್ದಾರೆ. ಬಳಿಕ ಆದಿತ್ಯ ಸೋಮವಾರ ಬೆಳಗ್ಗೆ 1 ಗಂಟೆಗೆ ದಿಲ್ಲಿಗೆ ಮರಳಲು ಆಕೆಯ ಬಿಟ್ಟು ತೆರಳಿದ್ದಾನೆ. ಬಳಿಕ ಸೃಷ್ಟಿ ಆದಿತ್ಯನಿಗೆ ದೂರವಾಣಿ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಪಹರಣವಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಪೊಲೀಸರು: ಕೊನೆಗೂ ತಾಯಿಯ ಮಡಿಲಿಗೆ

ಆದಿತ್ಯ ಕೂಡಲೇ ಹೊರಟು ಆಕೆಯ ಮನೆಗೆ ಧಾವಿಸಿದ್ದಾಗ ಆಕೆಯ ಮನೆ ಬಾಗಿಲು ಬೀಗ ಹಾಕಿತ್ತು. ನಕಲಿ ಕೀ ಬಳಸಿ ಒಳ ಹೋಗಿ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಆಕೆ ಜೀವಂತವಾಗಿರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಆಕೆಯ ಕುಟುಂಬಸ್ಥರು ಮುಂಬೈ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಆದಿತ್ಯ ಪಂಡಿತ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೂವೈ ಪೊಲೀಸ್ ಠಾಣೆಯ ಪೊಲೀಸರು ಆದಿತ್ಯನ ನವೆಂಬರ್ 29 ರವರೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X