ಬಾಣಂತಿ ಸಾವು ಪ್ರಕರಣ | ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸಚಿವ ಜಮೀರ್‌ ಸೂಚನೆ

Date:

Advertisements

ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗಿದ್ದಾರೆ ಎನ್ನುವ ಆರೋಪ ಕೇಳಿವರುತ್ತಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು.

ಒಂದು ವಾರದ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಬುಧವಾರ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೆ ಓರ್ವ ಬಾಣಂತಿ ಸಾವನ್ನಪ್ಪಿದ್ದಾರೆ.

Advertisements

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್‌ಪುರ ಗ್ರಾಮದ ಮಹಾಲಕ್ಷ್ಮಿ (20) ಎಂಬ ಗರ್ಭಿಣಿ, ರವಿವಾರ ಬಳ್ಳಾರಿಯ ಬಿಮ್ಸ್‌ ಆಸ್ಪತ್ರೆಗೆ ಹೆರಿಗೆ‌ಗೆ ದಾಖಲಾಗಿದ್ದರು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿಯೇ ಮಹಾಲಕ್ಷ್ಮಿ‌ಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು. ಆದರೆ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವ ಹಾಗೂ ನಂಜಾಗಿ ಬಾಣಂತಿ‌ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರ ವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.

“ಈ ಹಿಂದೆ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು” ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X