ರಾಮನಗರ | ನವಜಾತ ಶಿಶುವನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್, ಆಸ್ಪತ್ರೆ ಸಿಬ್ಬಂದಿ ಶಾಕ್

Date:

Advertisements

ನಾಗರಿಕ ಸಮಾಜ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ನವಜಾತ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ.

ಬುಧವಾರ ರಾತ್ರಿ ಈ ಅಮಾನವೀಯ ವಿದ್ಯಮಾನ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಪತ್ರೆಗೆ ಬಂದು ಶಿಶುವಿಗೆ ಜನ್ಮ ಕೊಟ್ಟಿರುವುದೇ ಅಥವಾ ಮಗು ಜನಿಸಿದ್ದನ್ನು ಮುಚ್ಚಿಡಲು ಮಾಡಿದ ಕೃತ್ಯವೇ ಎಂಬ ಬಗ್ಗೆ ಸದ್ಯ ತನಿಖೆ ನಡೆಯುತ್ತಿದೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಇನ್ನಷ್ಟು ವಿಚಾರಗಳು ತನಿಖೆಯಿಂದ ತಿಳಿದುಬರಬೇಕಿದೆ.

Advertisements

ಘಟನೆ ಬೆಳಕಿಗೆ ಬಂದಿದ್ದು ಹೇಗೆ?

ಆಸ್ಪತ್ರೆಯ ನೆಲಮಹಡಿಯ ಟಾಯ್ಲೆಟ್​ಗೆ ತೆರಳಿದ್ದ ವೈದ್ಯಕೀಯ ಸಿಬ್ಬಂದಿಗೆ ಮಹಿಳೆಯರ ಟಾಯ್ಲೆಟ್​​ನಲ್ಲಿ‌ ನೀರು ನಿಂತಿರುವುದು ಗಮನಕ್ಕೆ ಬಂದಿದೆ. ನೀರು ಫ್ಲಶ್ ಆಗದ ಕಾರಣ‌ ವೈದ್ಯಕೀಯ ಸಿಬ್ಬಂದಿ ಟಾಯ್ಲೆಟ್ ಸ್ವಚ್ಛಗೊಳಿಸಲು ಸಿಬ್ಬಂದಿಗೆ ಸೂಚಿಸಿದ್ದಾರೆ. ಅದರಂತೆ, ಸಿಬ್ಬಂದಿ ವ್ಯಾಕ್ಯೂಮ್‌ನಿಂದ ಕ್ಲೀನ್ ಮಾಡಿದ್ದಾರೆ. ಆಗ ಏನೋ‌ ವಸ್ತು ಅಡ್ಡ ಇರುವುದು ಪತ್ತೆಯಾಗಿದೆ. ಆರಂಭದಲ್ಲಿ, ಬಟ್ಟೆ ಅಥವಾ ಏನಾದರು ಕೊಳೆ ಇರಬಹುದು ಎಂದು ಅವರು ಶಂಕಿಸಿದ್ದಾರೆ.

ಟಾಯ್ಲೆಟ್ ಶುಚಿಗೊಳಿಸುವ ಬ್ಲಾಕ್ ನಿರ್ಮೂಲನೆಗೊಳಿಸುವ ಪರಿಕರವನ್ನು ಬಳಸಿ ಒಳಗೆ ಸಿಕ್ಕಿಹಾಕಿಕೊಂಡಿದ್ದ ವಸ್ತುವನ್ನು ಹೊರ ತೆಗೆದಾಗ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು. ನವಜಾತ ಶಿಶುವಿನ ದೇಹ ಅವರಿಗೆ ಸಿಕ್ಕಿದೆ. ಶಿಶು ಜನಿಸಿ ಒಂದೆರಡು ದಿನ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈಗ ಶಿಶುವಿನ ಮೃತದೇಹದ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಟಾಯ್ಲೆಟ್ ಒಳಗೆ ನವಜಾತ ಶಿಶು ಹೇಗೆ ಬಂದಿರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಯಾವ ತಾಯಿ ಕೂಡ ಹೀಗೆ ಮಾಡಲು ಸಾಧ್ಯವೇ ಎಂದು ಸ್ಥಳದಲ್ಲಿದ್ದವರು ಕಳವಳ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X