ಬಸವಣ್ಣ ಕುರಿತು ಅವಹೇಳನ: ಯತ್ನಾಳ್‌ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

Date:

Advertisements

ಬಸವಣ್ಣ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕ್ಷಮೆ ಕೇಳಬೇಕು ಎಂದು ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮನ್ವಯ ಸಮಿತಿ ಒತ್ತಾಯಿಸಿವೆ.

ಬೀದರ್‌ನಲ್ಲಿ ವಕ್ಫ್‌ ಆಸ್ತಿ ವಿವಾದದ ಸಂಬಂಧ ನಡೆದ ಪ್ರತಿಭಟನೆಯಲ್ಲಿ ಲಿಂಗಾಯತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದ ಯತ್ನಾಳ್‌, ‘ನೀವೆಲ್ಲರೂ ಮುಸ್ಲಿಮರಾಗಬೇಕಾಗುತ್ತದೆ’ ಎಂದು ಹೇಳಿ, ಅವಹೇಳನಕಾರಿ ಸನ್ಹೆ ಮಾಡಿದ್ದರು.

ಯತ್ನಾಳ್‌ ಹೇಳಿಕೆಯನ್ನು ಖಂಡಿಸಿ ಚೆನ್ನಬಸವಾನಂದ ಸ್ವಾಮೀಜಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರೆ. ”ಯತ್ನಾಳ್‌ ಅವರಿಗೆ ವಚನಗಳ ಅರಿವಿಲ್ಲ. ಅವರು ಯಾವಾಗಲೂ ಹಿಂದು, ಹಿಂದುತ್ವ ಎಂದು ತಿರುಗಾಡುವ ವೈದಿಕರ ಪಕ್ಷದಲ್ಲಿದ್ದಾರೆ. ಅವರು ವಚನ ಸಾಹಿತ್ಯವನ್ನು ಅಧ್ಯಯನ ಮಾಡಿಲ್ಲ. ಲಿಂಗಾಯತ ಧರ್ಮದ ಮಾಹಿತಿಯೂ ಇಲ್ಲ. ಅವರು ಬಸವಣ್ಣನವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ – ಬಸವ ಭಕ್ತರಲ್ಲಿ ಕೂಡಲೇ ಕ್ಷಮೆ ಕೇಳಬೇಕು” ಒತ್ತಾಯಿಸಿದ್ದಾರೆ.

Advertisements

ಇನ್ನು, ಲಿಂಗಾಯತ ಧರ್ಮ ಅಧ್ಯಯನ ಕೇಂದ್ರದ ಸಂಸ್ಥಾಪಕ ಶರಣ ಶ್ರೀಶೈಲ ಜಿ. ಮಸೂತೆ ಕೂಡ ಯತ್ನಾಳ್ ಹೇಳಿಕೆಯನ್ನು ಖಂಡಿಸಿದ್ದಾರೆ. ”ಜವಾಬ್ದಾರಿಯುತ ಚುನಾಯಿತ ಶಾಸಕ ಎಂಬುದನ್ನು ಮರೆತು ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ಅಪಮಾನಕರ ಮಾತನ್ನಾಡಿದ್ದಾರೆ. ಯತ್ನಾಳ್ ಅವರ ಹೇಳಿಕೆ ತಪ್ಪು. ಅವರು ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

”ತಾವು ಹುಟ್ಟಿದ ಧರ್ಮವನ್ನೇ ಮರೆತು, ವಿವೇಕ, ವಿವೇಚನೆ ಇಲ್ಲದೆ ಯಾರನ್ನೋ ಮೆಚ್ಚಿಸಲು ಅನಾಗರಿಕವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಮಾನಸಿಕ ಅಸ್ವಸ್ಥ ರಾಜಕಾರಣಿ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X