ಮಂಡ್ಯ | ಅಬಕಾರಿ ಅಧಿಕಾರಿಗಳ ವಿರುದ್ಧ ₹40 ಲಕ್ಷ ಲಂಚದ ಆರೋಪ; ಲೋಕಾಯುಕ್ತ ತನಿಖೆ ಆರಂಭ

Date:

Advertisements

ಮಂಡ್ಯ ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಪರವಾನಗಿ ನೀಡಲು ಅಬಕಾರಿ ಅಧಿಕಾರಿಗಳು ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ನೀಡಿದ ದೂರಿನಿಂದ ಈ ಪ್ರಕರಣ ತೀವ್ರತೆ ಪಡೆದುಕೊಂಡಿದೆ.

ಮದ್ದೂರು ತಾಲೂಕಿನ ಚಂದೂಪುರ ಗ್ರಾಮದ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ತಮ್ಮ ತಾಯಿ ಲಕ್ಷ್ಮಮ್ಮನ ಹೆಸರಿನಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಪರವಾನಗಿಗಾಗಿ ಅಬಕಾರಿ ಇಲಾಖೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಇಲಾಖೆಯ ಅಧಿಕಾರಿಗಳು “ಅನುಮತಿ ಪಡೆದು ಅರ್ಜಿ ಸಲ್ಲಿಸಿಲ್ಲ” ಎಂಬ ಕಾರಣದೊಂದಿಗೆ ಅರ್ಜಿಯನ್ನು ತಿರಸ್ಕರಿಸಿದರು.

ಅರ್ಜಿಯನ್ನು ಮತ್ತೆ ಸ್ವೀಕರಿಸಬಹುದೆಂಬ ಆಶೆಯಿಂದ ಪುನೀತ್ ಖುದ್ದಾಗಿ ಅಬಕಾರಿ ಇಲಾಖೆಗೆ ತೆರಳಿ ತಮ್ಮ ಅರ್ಜಿಯನ್ನು ಪುನಃ ಸಲ್ಲಿಸಿದರು. ಆದರೆ ಈ ಬಾರಿ, ಅಬಕಾರಿ ಇಲಾಖೆಯ ಮಂಡ್ಯ ಜಿಲ್ಲಾಧಿಕಾರಿ ರವಿಶಂಕರ್ ಮತ್ತು ಇನ್‌ಸ್ಪೆಕ್ಟರ್ ಶಿವಶಂಕರ್ ₹40 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆಂದು ಪುನೀತ್ ಆರೋಪಿಸಿದರು.

Advertisements

“ಲಂಚವನ್ನು ನೀಡಲು ನಿರಾಕರಿಸಿದ ಬಳಿಕ ₹30 ಲಕ್ಷ, ಬಳಿಕ ₹20 ಲಕ್ಷ ರೂಪಾಯಿಗಳ ಲಂಚಕ್ಕಾಗಿ ಒತ್ತಡ ಹಾಕಲಾಗಿದೆʼ ಇಷ್ಟಕ್ಕೂ ಲಂಚ ನೀಡಲು ಒಪ್ಪದಿರುವ ಕಾರಣ, ನಮ್ಮ ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಲಾಗಿದೆ” ಎಂದು ಪುನೀತ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಎಲ್ಲ ಸರ್ಕಾರದಿಂದ ರೈತರು, ಕಾರ್ಮಿಕರ ಶೋಷಣೆ: ರೈತ ಮುಖಂಡ ಕೆಂಪೂಗೌಡ

ಲಂಚದ ಬೇಡಿಕೆಯಿಂದ ಬೇಸತ್ತ ಪುನೀತ್, ಮಂಡ್ಯ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದರು. ಈ ವೇಳೆ, ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳನ್ನು ಕೂಡಾ ಲೋಕಾಯುಕ್ತ ಅಧಿಕಾರಿಗಳಿಗೆ ಒದಗಿಸಿದ್ದು, ತನಿಖೆ ಆರಂಭಿಸಲಾಗಿದೆ.

ಈ ಪ್ರಕರಣವು ಜಿಲ್ಲೆಯಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಸಾರ್ವಜನಿಕರಿಂದ ಲಂಚದ ಮೂಲಕ ಹಣ ಕೀಳಲು ಪ್ರಯತ್ನಿಸುತ್ತಿರುವುದು ಅಸಹ್ಯಕರ ಬೆಳವಣಿಗೆಯಾಗಿದೆ.

“ನಾನು ನನಗೆ ನ್ಯಾಯ ಸಿಗಲು ಕಾಯುತ್ತಿದ್ದೇನೆ. ರಾಜ್ಯದ ಎಲ್ಲ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ,” ಎಂದು ಪುನೀತ್ ತಿಳಿಸಿದ್ದಾರೆ. ಇದೀಗ ಅವರು ಲೋಕಾಯುಕ್ತದಿಂದ ಪೂರ್ಣವಾದ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಈಗ ತನಿಖೆ ಆರಂಭಿಸಿದ್ದು, ಆರೋಪಿಗಳಿಗೆ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದ್ದಾರೆ. ಸಾರ್ವಜನಿಕರಿಗೆ ಸತ್ಯತೆ ಬಯಲು ಮಾಡಲು ಲೋಕಾಯುಕ್ತರಿಂದ ತಕ್ಷಣವೇ ಸಂಪೂರ್ಣ ತನಿಖೆ ನಡೆಸಬೇಕೆಂಬುದು ದೂರುದಾರರ ನಿರೀಕ್ಷೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X