ರಾಮನಗರ | ಶವಸಂಸ್ಕಾರಕ್ಕೆ ದಲಿತರಿಗೆ ಅಡ್ಡಿ; ಸ್ಮಶಾನ ಭೂಮಿಗಾಗಿ ಶವವಿಟ್ಟು ಪ್ರತಿಭಟನೆ

Date:

Advertisements

ಶವಸಂಸ್ಕಾರ ಮಾಡಲು ಸ್ಮಶಾನ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದ‌ ದಲಿತ ಮುಖಂಡರು ಗುರುವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ ಯುವಕ ಬುಧವಾರ ಬೈಕ್ ಅಪಘಾತದಲ್ಲಿ ಸಾವಿಗೀಡಾಗಿದ್ದ. ಶವ ಸಂಸ್ಕಾರ ಮಾಡಲು‌ ಕುಟುಂಬದವರು ಶವವನ್ನು ಸ್ಮಶಾನಕ್ಕೆ‌ ತೆಗೆದುಕೊಂಡು ಹೋಗುವಾಗ ಸ್ಥಳೀಯರು ನಮ್ಮ ಜಮೀನಿನ ಮೇಲೆ ಹೋಗಬೇಡಿ ಎಂದು ಅಡ್ಡಿಪಡಿಸಿದ್ದರು.

ಸ್ಮಶಾನಕ್ಕೆ ಹೋಗಲು ಜಾಗವಿಲ್ಲದ‌ ಕಾರಣ ಕುಪಿತಗೊಂಡ ಗ್ರಾಮಸ್ಥರು ಶವ ಮತ್ತು ಸೌದೆಯೊಂದಿಗೆ ಚನ್ನಪಟ್ಟಣಕ್ಕೆ ತೆರಳಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, “ಜಿಲ್ಲಾಧಿಕಾರಿ ಸ್ಥಳಕ್ಕೆ‌ ಬರಬೇಕು. ‌ಗ್ರಾಮದ ದಲಿತರಿಗೆ ಸ್ಮಶಾನ ಭೂಮಿ ಕಲ್ಪಿಸಬೇಕು. ಸ್ಮಶಾನ‌ಕ್ಕೆ ಹೋಗಲು ಜಾಗ ಕೊಡಿಸದಿದ್ದರೆ, ಕಚೇರಿ ಆವರಣದಲ್ಲೇ ಶವಸಂಸ್ಕಾರ ಮಾಡಲಾಗುವುದು” ಎಂದು ಎಚ್ಚರಿಸಿದರು.

Advertisements

ದೇವರಹೊಸಹಳ್ಳಿ ನಿವಾಸಿ ಹನುಮಂತ ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮೇಲ್ಜಾತಿ ವ್ಯಕ್ತಿಯೊಬ್ಬ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ದಲಿತರು ಅಲ್ಲಿ ಓಡಾಡಲು ಬಿಡುತ್ತಿರಲಿಲ್ಲ. ಈ ಕುರಿತು ಮೂರ್ನಾಲ್ಕು ಬಾರಿ ತಹಶೀಲ್ದಾರರು ಬಂದು ಜಾಗ ಪರಿಶೀಲನೆ ಮಾಡಿ, ಅವರ ಬಳಿ ಜಾಗದ ದಾಖಲೆಗಳನ್ನು ಕೇಳಿದ್ದರು. ಆಗ ಯಾವುದೇ ದಾಖಲೆಗಳಿಲ್ಲವೆಂದಿದ್ದ ಆತ ಇದೀಗ ಅಕ್ರಮವಾಗಿ ಎಲ್ಲ ದಾಖಲೆಗಳನ್ನು ಅವರ ಹೆಸರಿಗೆ ಮಾಡಿಸಿಕೊಂಡಿದ್ದು, ಗೋಮಾಳ ಭೂಮಿಯನ್ನು ತನ್ನದಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

“ನಿನ್ನೆ ಶವಸಂಸ್ಕಾರ ಮಾಡಲೆಂದು ಮೃತದೇಹ ಕೊಂಡೊಯ್ಯುವಾಗ ಹೊಲದ ಮೇಲೆ ಹೋಗಬೇಡಿ ಅಂತ ತಗಾದೆ ತೆಗೆದರು. ಬಳಿಕ ತಾಲೂಕು ಕಚೇರಿ ಬಳಿ ಹೋಗಿ ಶವವಿಟ್ಟು ಪ್ರತಿಭಟನೆ‌ ನಡೆಸಿದೆವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನರಸಿಂಹ ಮೂರ್ತಿ ದೇವರಹೊಸಹಳ್ಳಿ ಗ್ರಾಮಕ್ಕೆ‌ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದರು. ”ಸ್ಮಶಾನಕ್ಕೆ ‌ಜಾಗವಿದ್ದು, ಸ್ಮಶಾನಕ್ಕೆ ಹೋಗಲು ರಸ್ತೆಯಿಲ್ಲದ ಕಾರಣ ಸಮಸ್ಯೆ ಎದುರಾಗಿದೆ. ಸಮಸ್ಯೆ ಪರಿಹರಿಸುತ್ತೇವೆಂದು ಅಧಿಕಾರಿಗಳು ಭರವಸೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

“ಸ್ಮಶಾನಕ್ಕೆ ಜಾಗ ನೀಡುವವರೆಗೆ ನಾವು ಸ್ಥಳದಿಂದ ಕದಲುವುದಿಲ್ಲವೆಂದು ಪ್ರತಿಭಟನೆ ಮುಂದುವರೆಸಿದ್ದೆವು. ಬಳಿಕ ಪೊಲೀಸ್‌ ಅಧಿಕಾರಿಗಳು, ತಹಶೀಲ್ದಾರ್‌ ಸೇರಿದಂತೆ ಹಲವು ಮಂದಿ ಅಧಿಕಾರಿಗಳು ಗ್ರಾಮಕ್ಕೆ ಬಂದರು. ಅಧಿಕಾರಿಗಳ ಬಂದೋಬಸ್ತ್‌ನಲ್ಲಿ ಶವಸಂಸ್ಕಾರ ಮಾಡಿದೆವು. ಇದೀಗ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಿ ದಲಿತರ ಸ್ಮಶಾನಕ್ಕೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X