ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಹುಸಿ ಮಾಡದೇ ಕೆಲಸ ಮಾಡಿ; ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸೂಚನೆ

Date:

Advertisements
  • ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯು ಟಿ ಖಾದರ್‌ಗೆ ಸಿಎಂ ಅಭಿನಂದನೆ
  • ಕೇಂದ್ರ ಸರ್ಕಾರದ ತಾರತಮ್ಯ ಕುರಿತು ಶಾಸಕರಿಗೆ ಸಿದ್ದರಾಮಯ್ಯ ಮನವರಿಕೆ

ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡು ನಮಗೆ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. ಐದು ವರ್ಷಗಳ ಕಾಲ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಈಡೇರಿಸಿ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು (ಮೆ 24) 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು ಟಿ ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಿ ಮಾತನಾಡಿದ ಅವರು, ತಮ್ಮ ಪಕ್ಷದ ಶಾಸಕರುಗಳಿಗೆ ಸಲಹೆ, ಸೂಚನೆ ನೀಡಿದರು.

“ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ. ಬಿಜೆಪಿಯವರು ಮಾಡುವ ಸುಳ್ಳು ಆಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು” ಎಂದರು.

Advertisements

“ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ. ನಮ್ಮ ನಾಡಿನ‌ ಜನತೆ ಕಟ್ಟುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಕ್ರಿಯಾಶೀಲ ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು” ಎಂದು ಕೇಂದ್ರದ ತಾರತಮ್ಯ ಕುರಿತು ಮನವರಿಕೆ ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಜ್ರೀವಾಲ್ ಸರ್ಕಾರದ ವಿರುದ್ಧ ಮೋದಿ ಸೇಡಿನ ಕ್ರಮ

“ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಬಾಯಿ ಬಿಡಲಿಲ್ಲ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕು. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಿ” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X