ಚಲಿಸುತ್ತಿದ್ದ ಆ್ಯಂಬುಲೆನ್ಸ್‌ನಲ್ಲಿಯೇ 16ರ ಬಾಲಕಿ ಮೇಲೆ ಅತ್ಯಾಚಾರ, ಐವರು ಆರೋಪಿಗಳ ಬಂಧನ

Date:

Advertisements

ಚಲಿಸುತ್ತಿದ್ದ ಆ್ಯಂಬುಲೆನ್ಸ್‌​ನಲ್ಲಿಯೇ ದುರುಳರು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಮೌಗಂಜ್​ ಜಿಲ್ಲೆಯಲ್ಲಿ ನಡೆದಿದೆ. 

ನವೆಂಬರ್​ 22ರಂದು ತುರ್ತು ಸೇವಾ ಆಂಬ್ಯುಲೆನ್ಸ್​ 108ರಲ್ಲಿ ದುಷ್ಕೃತ್ಯ ಎಸಗಿದ ನಾಲ್ವರು ದುರುಳರ ಪೈಕಿ ಚಾಲಕ​ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರೇವಾ ವ್ಯಾಪ್ತಿಯ ಪ್ರಧಾನ ಉಪ ಇನ್ಸ್‌ಪೆಕ್ಟರ್​​ ಸಾಕೇತ್​ ಪಾಂಡೆ ಮಾಹಿತಿ ನೀಡಿದ್ದಾರೆ.

ನವೆಂಬ‌ರ್ 22ರಂದು ಶಾನಸಾನ್ ಎಂಬ ಹಳ್ಳಿಯ ಬಳಿ ಬಾಲಕಿ ಮತ್ತು ಆತನ ಸಂಬಂಧಿ ಬಾಲಕನನ್ನು 108 ಆ್ಯಂಬುಲೆನ್ಸ್‌ನಲ್ಲಿ ಆರೋಪಿಗಳ ಹತ್ತಿಸಿಕೊಂಡಿದ್ದರು. ಈ ವೇಳೆ ಬಾಲಕಿಯ ಸಂಬಂಧಿ ನೀರು ತರುವ ನೆಪದಲ್ಲಿ ಮಾರ್ಗಮಧ್ಯದಲ್ಲಿ ಇಳಿದು ಹೋಗಿದ್ದ. ನಂತರ ಆಂಬುಲೆನ್ಸ್ ಚಲಿಸುತ್ತಿರುವಾಗಲೇ ರಾಜೇಶ್ ಕೇವಾತ್ ಎನ್ನುವ ಯುವಕ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯನ್ನು ರಾತ್ರಿಯಿಡೀ ತಮ್ಮ ವಶದಲ್ಲಿರಿಸಿಕೊಂಡಿದ್ದು, ಮರುದಿನ ಬೆಳಗ್ಗೆ ರಸ್ತೆ ಬದಿ ಎಸೆದು ಹೋಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಪಡುಬಿದ್ರಿ ವಿವಾಹಿತ ಮಹಿಳೆ ನಾಪತ್ತೆ, ಪ್ರಕರಣ ದಾಖಲು

ಮನೆ ತಲುಪಿದ ಸಂತ್ರಸ್ತೆ ನಡೆದ ಘಟನೆಯನ್ನು ತಾಯಿಗೆ ವಿವರಿಸಿದ್ದಾರೆ. ಸಮಾಜದಲ್ಲಿ ಕುಟುಂಬದ ಗೌರವ ಏನಾಗುತ್ತದೋ ಎಂಬ ಆತಂಕದಿಂದ ಎರಡು ದಿನಗಳ ಕಾಲ ಅವರು ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಬಳಿಕ ನವೆಂಬರ್​ 25ರಂದು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಬಾಲಕಿಯ ಸಂಬಂಧಿ ಹಾಗೂ ಚಾಲಕ ಸೇರಿದಂತೆ ಇತರ ಮೂವರು ಸಹಕಾರ ಕೊಟ್ಟಿದ್ದಾರೆ ಎಂದು ರೇವಾ ವಲಯದ ಡಿಐಜಿಪಿ ಸಾಕೇತ್ ಪಾಂಡೆ ತಿಳಿಸಿದ್ದಾರೆ.

25ರಿಂದ 30 ವರ್ಷದ ಐವರ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಮೇಲೆ ಪೋಕ್ಸೋ ಮತ್ತು ಭಾರತೀಯ ನ್ಯಾಯಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X